Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ಮಳೆಗೆ ತೋಟಗಾರಿಕೆ ಬೆಳೆಗಳು ನಾಶ : ಪರಿಹಾರಕ್ಕಾಗಿ ರೈತರ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23  : ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಈರುಳ್ಳಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿರುವುದರಿಂದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಡಿ.ಎಸ್.ಹಳ್ಳಿ, ಜೋಡಿಚಿಕ್ಕೇನಹಳ್ಳಿ, ತೋಪುರಮಾಳಿಗೆ, ದ್ಯಾಮವ್ವನಹಳ್ಳಿ, ಕಾಸವರಹಟ್ಟಿ, ದಂಡಿನಕುರುಬರಹಟ್ಟಿ, ನರೇನಾಳ್, ಜೆ.ಎನ್.ಕೋಟೆ, ಎಣ್ಣೆಗೆರೆ ಇನ್ನು ಮುಂತಾದ ಗ್ರಾಮಗಳಲ್ಲಿ ಬೆಳೆ ಹಾನಿಯಾಗಿರುವ ಚೀಕಲು ಈರುಳ್ಳಿಯನ್ನು ಪ್ರದರ್ಶಿಸಿದ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವರ್ಷದ ಬರಗಾಲವನ್ನೆ ರೈತರು ಇನ್ನು ಸುಧಾರಿಸಿಕೊಳ್ಳಲು ಆಗದೆ ಸಾಲಗಾರರಾಗಿದ್ದಾರೆ. ಆರಂಭದಲ್ಲಿ ಉತ್ತಮ ಮಳೆಯಾಯಿತಾದರೂ ಕಳೆದ ಇಪ್ಪತ್ತು ದಿನಗಳಿಂದ ಸುರಿದ ಮಳೆಗೆ ಈರುಳ್ಳಿ ಹಾಗೂ ಇನ್ನಿತರೆ ತೋಟಗಾರಿಕೆ ಬೆಳೆಗಳು ಕೊಳೆತು ನಾಶವಾಗಿವೆ. ಕೃಷಿಗಾಗಿ ಸಾಲ ಮಾಡಿರುವ ರೈತ ಒಕ್ಕಲುತನಕ್ಕೆ ಹಾಕಿದ ಬಂಡವಾಳವೂ ಕೈಗೆ ಸಿಗದೆ ಕಂಗಾಲಾಗಿದ್ದಾನೆ. ತಕ್ಷಣವೆ ಬೆಳೆ ಸಮೀಕ್ಷೆ ನಡೆಸಿ ಹಾನಿಗೊಳಗಾಗಿರುವ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಬೆಳೆವಿಮೆಗೊಳಪಟ್ಟವರಿಗೆ ತಡ ಮಾಡದೆ ಬೆಳೆ ಪರಿಹಾರ ನೀಡಬೇಕೆಂದು ಜಿಲ್ಲಾಡಳಿತವನ್ನು ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.

ತಾಲ್ಲೂಕಿನಲ್ಲಿ ಹೆಚ್ಚಾಗಿ ಖುಷ್ಕಿ ಜಮೀನುಗಳಲ್ಲಿ ಸೂರ್ಯಕಾಂತಿ ಬೆಳೆದಿದ್ದು, ಖರೀಧಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಗೆ ಖರೀಧಿಸಿ ಜಿಲ್ಲಾಡಳಿತ ರೈತರ ನೆರವಿಗೆ ಮುಂದಾಗಬೇಕೆಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ತಾಲ್ಲೂಕು ಅಧ್ಯಕ್ಷ ಬಿ.ಇ.ಮಂಜುನಾಥ, ರಾಮರೆಡ್ಡಿ, ಮಹಂತೇಶ್‍ರೆಡ್ಡಿ, ರಾಜಶೇಖರ್, ರಾಮರೆಡ್ಡಿ, ಪರಶಿವಣ್ಣ, ಪ್ರವೀಣ, ಮಾರುತಿ, ಸದಾಶಿವ, ನಾಗರಾಜ್‍ರೆಡ್ಡಿ, ಸುರೇಶ್‍ರೆಡ್ಡಿ, ಕೃಷ್ಣಪ್ಪ, ಲೋಕೇಶ, ಶಶಿಧರ, ಕೇಶವರೆಡ್ಡಿ, ಹರಳಯ್ಯ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...