Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜಿಲ್ಲೆಯಲ್ಲಿ ಸೋಮವಾರ ಸುರಿದ ಮಳೆ ವರದಿ

---Advertisement---

ಚಿತ್ರದುರ್ಗ. ಮೇ.21 :  ಸೋಮವಾರ ರಾತ್ರಿ ಸುರಿದ ಮಳೆಗೆ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 108.6 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 54.4 ಮಿ.ಮೀ, ಇಕ್ಕನೂರಿನಲ್ಲಿ 68.4 ಮಿ.ಮೀ, ಈಶ್ವರಗೆರೆಯಲ್ಲಿ 51 ಮಿ.ಮೀ, ಬಬ್ಬೂರಿನಲ್ಲಿ 59.2ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 45.8 ಮಿ.ಮೀ, ಚಿತ್ರದುರ್ಗ-2ರಲ್ಲಿ 41.3 ಮಿ.ಮೀ ಭರಮಸಾಗರದಲ್ಲಿ 38.4ಮಿ.ಮೀ, ಹಿರೇಗುಂಟನೂರಿನಲ್ಲಿ 13.4ಮಿ.ಮೀ, ತುರುವನೂರಿನಲ್ಲಿ 28.6ಮಿ.ಮೀ, ಸಿರಿಗೆರೆ 28.8ಮಿ.ಮೀ ಹಾಗೂ ಐನಳ್ಳಿಯಲ್ಲಿ 36.2 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 72.6 ಮಿ.ಮೀ, ಬಾಗೂರು 55.5 ಮಿ.ಮೀ, ಮಾಡದಕೆರೆ 62 ಮಿ.ಮೀ, ಮತ್ತೋಡಿನಲ್ಲಿ 13.2 ಮಿ.ಮೀ ಹಾಗೂ ಶ್ರೀರಾಂಪುರದಲ್ಲಿ 45.2 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 30.6 ಮಿ.ಮೀ, ರಾಮಗಿರಿ 31.5ಮಿ.ಮೀ, ಚಿಕ್ಕಜಾಜೂರು 30.5 ಮಿ.ಮೀ, ಬಿ.ದುರ್ಗ 29.2 ಮಿ.ಮೀ, ಹೆಚ್.ಡಿ.ಪುರ 38.6 ಮಿ.ಮೀ ಮತ್ತು ತಾಳ್ಯದಲ್ಲಿ 6.2ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 44 ಮಿ.ಮೀ, ಪರಶುರಾಂಪುರ 46.2ಮಿ.ಮೀ, ನಾಯಕನಹಟ್ಟಿ 50.4ಮಿ.ಮೀ, ತಳಕು 31.2ಮಿ.ಮೀ ಹಾಗೂ ಡಿ.ಮರಿಕುಂಟೆಯಲ್ಲಿ 35.4ಮಿ.ಮೀ ಮಳೆಯಾಗಿದೆ.

ಜಿಲ್ಲೆಯಾದ್ಯಂತ 34 ಮನೆ ಭಾಗಶಃ ಹಾನಿ, 11.48 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ: ಸೋಮವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 34 ಮನೆಗಳು ಭಾಗಶಃ ಹಾನಿಯಾಗಿದ್ದು, 1 ದೊಡ್ಡ ಜಾನುವಾರು, 2 ಸಣ್ಣ ಜಾನುವಾರು ಹಾಗೂ 1 ಜೀವಹಾನಿಯಾಗಿದೆ. ಜಿಲ್ಲೆಯಾದ್ಯಂತ ಒಟ್ಟು 11.48 ಹೆಕ್ಟೇರ್ ತೋಟಗಾರಿಕೆ ಬೆಳೆನಾಶ ಮತ್ತು  ಮೂರು ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ವರದಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 5 ಮನೆಗಳು ಭಾಗಶಃ ಹಾನಿಯಾಗಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ ಭಾಗಶಃ 7 ಮನೆಹಾನಿ, 1 ದೊಡ್ಡ ಜಾನುವಾರು ಹಾಗೂ 1 ಜೀವಹಾನಿ ಹಾಗೂ 3 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನಲ್ಲಿ ಭಾಗಶಃ 4 ಮನೆಗಳು ಹಾನಿಯಾಗಿವೆ. ಹೊಸದುರ್ಗ ತಾಲ್ಲೂಕಿನಲ್ಲಿ 10 ಮನೆಗಳು ಭಾಗಶಃ ಹಾನಿ ಹಾಗೂ 2 ಸಣ್ಣ ಜಾನುವಾರು, 1 ಹೆಕ್ಟೇರ್ ತೋಟಗಾರಿಕೆ ಬೆಳೆ ಮತ್ತು 3 ಮನೆಗಳಿಗೆ ನೀರು ನುಗ್ಗಿರುವ ಕುರಿತು ಪ್ರಕರಣ ವರದಿಯಾಗಿದೆ.

ಹಿರಿಯೂರು ತಾಲ್ಲೂಕಿನಲ್ಲಿ ಭಾಗಶಃ 5 ಮನೆಹಾನಿ ಮತ್ತು 7.48 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಭಾಗಶಃ 3 ಮನೆಗಳು ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...