Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬಿಜೆಪಿ ಕಚೇರಿಯಲ್ಲಿ ರಾಜವೀರ ಮದಕರಿನಾಯಕರ ಜಯಂತಿ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಆ. 13 : ಶತ್ರುಗಳನ್ನು ಸದೆಬಡಿದು ಗಂಡುಮೆಟ್ಟಿನ ನಾಡು ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ರಕ್ಷಿಸಿ ಎಲ್ಲರ ಪ್ರಾಣ ಮಾನ ಕಾಪಾಡಿದ ರಾಜಾವೀರ ಮದಕರಿನಾಯಕನನ್ನು ಪ್ರತಿಯೊಬ್ಬರು ಸ್ಮರಿಸಿಕೊಳ್ಳಬೇಕು ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ ಶಿವಣ್ಣ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ರಾಜವೀರ ಮದಕರಿನಾಯಕರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜವೀರ ಮದಕರಿ ನಾಯಕ ವಂಶಸ್ಥರು ಇಲ್ಲಿಗೆ ಬರುವುದಕ್ಕಿಂತ ಮುಂಚೆ ಶ್ರೀಶೈಲಾದ ಬಳಿಯ ಜಡಿಕಲ್ಲು ಗುಡ್ಡದಿಂದ ಬಂದು ವಿಜಯನಗರ ರಾಜರ ಬಳಿ ಆಶ್ರಯ ಪಡೆದು ತದ ನಂತರ ಅವರಿಂದ ಚಿತ್ರದುರ್ಗ ಸೇರಿದಂತೆ ಇತರೆ ಜಿಲ್ಲೆಗಳನ್ನು ಬಳುವಳಿಯಾಗಿ ಪಡೆದು ತಮ್ಮ ರಾಜ್ಯವನ್ನು ಸ್ಥಾಪನೆ ಮಾಡಿದರು. ತದ ನಂತರ ಹೊಸದುರ್ಗ ತಾಲ್ಲೂಕಿನ ಜಾನಕಲ್ಲು ಬಳಿ ಬಂದು ಆಶ್ರಯವನ್ನು ಪಡೆದರು. ತಮ್ಮ ಆಧಿಕಾರ ಅವಧಿಯಲ್ಲಿ ಉತ್ತಮವಾದ ಆಡಳಿತವನ್ನು ಜನರಿಗೆ ನೀಡಿದರು ಇದ್ದಲ್ಲದೆ ಉತ್ತಮವಾದ ನೀರಿನ ವ್ಯವಸ್ಥೆಯನ್ನು ಮಾಡುವುದರ ಮೂಲಕ ಜನರಿಗೆ ನೀರಿನ ತೊಂದರೆ ಇಲ್ಲದಂತೆ ಮಾಡಿದ್ದರು ಇದ್ದಲ್ಲದೆ ಜಿಲ್ಲೆಯಲ್ಲಿ ಉತ್ತಮವಾದ ಕೆರೆ ಕಟ್ಟೆಗಳನ್ನು ನಿರ್ಮಾಣ ಮಾಡುವುದರ ಮೂಲಕ ನೀರಿನ ಸಮಸ್ಯೆಯನ್ನು ನಿವಾರಣೆ ಮಾಡಿದರು ಅದನ್ನು ಈಗಲೂ ಸಹಾ ನೋಡಬಹುದಾಗಿದೆ ಎಂದರು.

ಒಮ್ಮೆ ಆನೆ ಮದವನ್ನು ಏರಿತ್ತು ಇದನ್ನು ಕಂಡ ಅಗಿನ ರಾಜರಾದ ಇವರು ಅದನ್ನು ಹಿಡಿದು ಪಳಗಿಸಿ ತಹ ಬದಿಗೆ ತಂದರು. ಇದನ್ನು ಕಂಡ ಶೃಂಗೇರಿಯ ಶ್ರೀಗಳು ಇವರಿಗೆ ಮದಕರಿ ಎಂದು ಬಿರುದನ್ನು ನೀಡಿದರು. ಆಗಿನಿಂದ ಇವರ ಹೆಸರಿನಲ್ಲ್ಲಿ ಮದಕರಿ ಸೇರಿತು. ಇವರಿಗೆ 12 ವರ್ಷದಲ್ಲಿ ಪಟ್ಟವನ್ನು ಕಟ್ಟಲಾಯಿತು.

ಸಂಘ ಪರಿವಾರದ ಸಾಮರಸ್ಯ ಸಂಘಟಕರಾದ ವಾದಿರಾಜ್ ಜಿ ಮದಕರಿನಾಯಕ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್. ರಾಜ್ಯ ಕಾರ್ಯಕಾರಣಿ ಮಾಜಿ ಸದಸ್ಯರಾದ ಪಾಪೇಶ್ ನಾಯಕ ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಾಳೇಕಾಯಿ ರಾಮ್‍ದಾಸ, ಸಂಪತ್ ಕುಮಾರ್. ಚಳ್ಳಕೆರೆ ಕ್ಷೇತ್ರ ಮುಖಂಡರಾದ ಕೆ ಟಿ ಕುಮಾರಸ್ವಾಮಿ ಎಸ್ಟಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಕವನ. ನಿಕಟಪೂರ್ವ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿಯಾದ ಮಂಜುನಾಥ್. ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಕಲ್ಲೇಶಯ್ಯ ಚಿತ್ರ ನಾಯಕ ಸಂಘದ ಅಧ್ಯಕ್ಷರಾದ ಪ್ರಶಾಂತ್ ಕೂಲಿಕಾರ್ ಯುವ ಮುಖಂಡರಾದ ಸೋಮು ರೈತ ಮಾರುತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರಮ್ಮನಹಳ್ಳಿ ನಾಗರಾಜ್. ಬೋಸೆರಂಗಸ್ವಾಮಿ. ಎಸ್ಟಿ ಮೋರ್ಚಾ ಗ್ರಾಮಾಂತರ& ನಾಯಕನಹಟ್ಟಿ ಮಂಡಲ ಅಧ್ಯಕ್ಷರಾದ ಶಿವಪ್ರಸಾದ್ ಪಾರ್ವತಯ್ಯ. ಸೇರಿದಂತೆ ವಿವಿಧ ಹಂತದ ಪದಾಧಿಕಾರಿಗಳು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment