Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಪಾರ್ಶ್ವನಾಥ ಶಾಲೆಯ ವಿದ್ಯಾರ್ಥಿಗಳಿಂದ ರಕ್ಷಾ ಬಂಧನ ಆಚರಣೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆ.19:  ನಗರದ ಪಾರ್ಶ್ವ ನಾಥ ವಿದ್ಯಾ ಸಂಸ್ಥೆಯ ಆಡಿಯಲ್ಲಿ ಸೋಮವಾರ ರಕ್ಷಾ ಬಂಧನ ಕಾರ್ಯಕ್ರಮವನ್ನು ಶಾಲಾ ಮಕ್ಕಳಿಗಾಗಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಪಾಶ್ರ್ವನಾಥ ವಿದ್ಯಾ ಸಂಸೈಯ ಉಪಾಧ್ಯಕ್ಷರಾದ ಉತ್ತಮಚಂದ್ ಸುರಾನ ಮಾತನಾಡಿ, ಸೋದರತ್ವದ ಭಾಂದವ್ಯ ಸಾರುವ ಹಬ್ಬವೇ ರಕ್ಷಾ ಬಂಧನವಾಗಿದೆ ಅಣ್ಣ-ತಂಗಿಯವ ಮಧ್ಯೆ ಪ್ರೀತಿಯನ್ನು ಮೂಡಿಸುವ ಹಬ್ಬವಾಗಿ ರಾಖಿ ಹಬ್ಬ ದ್ವಾಪರಯುಗದಿಂದಲೂ ಸಹಾ ಆಚರಣೆಯಲ್ಲಿ ಇದೆ ನಮ್ಮ ಶಾಲೆಯಲ್ಲಿ ಈ ಹಬ್ಬವನ್ನು ಆಚರಣೆ ಮಾಡುವುದರ ಮೂಲಕ ಶಾಲೆಯಲ್ಲಿ ಅಭ್ಯಾಸವನ್ನು ಮಾಡುವ ಮಕ್ಕಳಲ್ಲಿ ಸಹೋದರ ಭಾವನೆಯನ್ನು ಮೂಡಿಸುವ ವಾತಾವರಣವನ್ನು ನಿರ್ಮಾಣ ಮಾಡಲಾಗುವುದು ಎಂದರು.

ಸೋದರಿಗೆ ರಕ್ಷಣೆಯ ಭರವಸೆಯನ್ನು ನೀಡುವ ಸೋದರತೆಯನ್ನು ಸಾರುವ ರಕ್ಷಾ ಬಂಧನಕ್ಕೆ ಶತಮಾನಗಳ ಇತಿಹಾಸ ಇದೆ, ಪೌರಾಣಿಕ ಹಿನ್ನಲೆಯನ್ನು ಸಹಾ ಹೊಂದಿದೆ. ರಕ್ಷಾ ಬಂಧನ ಎನ್ನುವುದು ಪವಿತ್ರವಾದ ಸಂಸ್ಕøತ ಪದವಾಗಿದೆ. ರಕ್ಷಣೆಯ ಬಂಧ ಎಂದು ಇದರ ಅರ್ಥ, ರಕ್ಷಾ ಬಂಧನದಲ್ಲಿ ಸಹೋದರಿಯರು ತಮ್ಮ ಸಹೋದರರಿಗೆ ಏಳ್ಗೆಯನ್ನು ಬಯಸುತ್ತಾರೆ. ಭಗವಂತ ಇವರಿಗೆ ಧೀರ್ಘಾಯಷ್ಯಕ್ಕಾಗಿ ವ್ರತವನ್ನು ಆಚರಣೆ ಮಾಡುತ್ತಾ ಸಹೋದರನ ಮಣಿ ಕೈಗೆ ರಕ್ಷಾ ದಾರವನ್ನು ಕಟ್ಟುತ್ತಾರೆ. ಇದರ ಮೂಲಕ ಸಹೋದರನಿಂದ ರಕ್ಷಣೆಯನ್ನು ಭರವಸೆಯನ್ನು ಪಡೆಯುತ್ತಾರೆ. ಇದರೊಂದಿಗೆ ಸಹೋದರಿಯನ್ನು ರಕ್ಷಿಸುವ ಜವಾಬ್ದಾರಿಯನ್ನು ನೀಡುತ್ತಾನಲ್ಲದೆ ಸಹೋದರ-ಸಹೋದರಿಯ ನಡುವಿನ ಸಂಬಂಧ ಬಲವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಾ ಕಾರ್ಯದರ್ಶಿ ಸುರೇಶ್ ಮುತ್ತ, ಖಂಜಾಚಿ ರಾಜೇಂದ್ರ ದಲೇಷಾ, ಮುಖ್ಯ ಶಿಕ್ಷಕಿಯಾದ ನಾಜಿಮಾ ಶಾಂತಕುಮಾರಿ ಹಾಗೂ ಶಿಕ್ಷಕಿಯರು ಭಾಗವಹಿಸಿದ್ದರು, ತದ ನಂತರ ಮಕ್ಕಳಿಂದ ರಕ್ಷಾ ಬಂಧನ ಕುರಿತಾ ನೃತ್ಯ ಪ್ರದರ್ಶನವಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...