ಸುದ್ದಿಒನ್, ಚಿತ್ರದುರ್ಗ, ನವೆಂಬರ್, 16 : ನಗರದ ವಿದ್ಯಾನಗರ ಏಳುಕೋಟಿ ಬಡಾವಣೆ ನಿವಾಸಿ ರತ್ನಮ್ಮ(67) ಭಾನುವಾರ ಮಧ್ಯಾಹ್ನ ನಿಧನ ಹೊಂದಿದರು.

ಮೃತರು ಭದ್ರಾ ಮೇಲ್ದಂಡೆ ಯೋಜನೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆರ್ . ಮನು ಸೇರಿದಂತೆ ಇಬ್ಬರು ಪುತ್ರರ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಎರಡು ಗಂಟೆಗೆ ಜೋಗಿಮಟ್ಟಿ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
















