Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿ ನೋಂದಣಿ ಫೆಬ್ರವರಿ 1ಕ್ಕೆ ಮುಂದೂಡಿಕೆ

---Advertisement---

 

 

ಸುದ್ದಿಒನ್,ಚಿತ್ರದುರ್ಗ, ಜನವರಿ.21  : ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಉಂಡೆಕೊಬ್ಬರಿಯನ್ನು ಖರೀದಿಸುವ ನೋಂದಣಿ ಪ್ರಕ್ರಿಯೆಯನ್ನು ಸರ್ಕಾರ ಆದೇಶದ ಅನುಸಾರ 2024ರ ಫೆಬ್ರವರಿ 1ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಬಯೋಮೆಟ್ರಿಕ್ ಮೂಲಕ ರೈತರು ನೊಂದಣಿ ಮಾಡಿಕೊಳ್ಳುವ ತಂತ್ರಾಂಶದ ಉನ್ನತಿ ಕಾರ್ಯ ಪ್ರಗತಿಯಲ್ಲಿರುವುದರಿಂದ ತಾತ್ಕಾಲಿಕವಾಗಿ ಕೊಬ್ಬರಿ ಖರೀದಿ ನೊಂದಣಿ ಕಾರ್ಯ ಮುಂದೂಡಲಾಗಿದೆ.
ತಂತ್ರಾಂಶ ಉನ್ನತೀಕರಣದ ನಂತರ ಜಿಲ್ಲೆಯ ರೈತರು ಚಿತ್ರದುರ್ಗ, ಹಿರಿಯೂರು ಹಾಗೂ ಹೊಸದುರ್ಗ ಎ.ಪಿ.ಎಂ.ಸಿಗಳಲ್ಲಿ ಆಧಾರ್ ಕಾರ್ಡ್ ಮತ್ತು ಎಫ್.ಐ.ಡಿ ಕಾರ್ಡ್‍ಗಳೊಂದಿಗೆ ಬಯೋಮೆಟ್ರಿಕ್ ನೋಂದಣಿ ಮಾಡಿಕೊಳ್ಳಬಹುದು. ಅಲ್ಲಿಯವರೆಗೆ ರೈತರು ಸಹಕರಿಸಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ ಚಿತ್ರದುರ್ಗ ಶಾಖಾ ವ್ಯವಸ್ಥಾಪಕ ಬಸವೇಶ ಎಸ್.ನಾಡಿಗರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...