Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿಗೆ ಮಗು ಜನನ : ವೈದ್ಯ ಮಲ್ಲಿಕಾರ್ಜುನ ಕೀರ್ತಿ ಹೇಳಿದ್ದೇನು ?

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 16 : ದರ್ಶನ್ ಗ್ಯಾಂಗ್ ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪತ್ನಿ ಸಹನಾ ಬುಧವಾರ ಬೆಳಿಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗುವಿನ ಆರೋಗ್ಯದ ಬಗ್ಗೆ ಕೀರ್ತಿ ಆಸ್ಪತ್ರೆಯ ವೈದ್ಯ ಡಾ.ಮಲ್ಲಿಕಾರ್ಜುನ ಕೀರ್ತಿ ಮಾಹಿತಿ ನೀಡಿದ್ದು, ಹಲವು ಅಂಶಗಳನ್ನು ತೆರೆದಿಟ್ಟಿದ್ದಾರೆ.

ಮಂಗಳವಾರ ರಾತ್ರಿ ಸಹನಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದ ಬುಧವಾರ ಬೆಳಿಗ್ಗೆ 6.55 ಕ್ಕೆ ಸಹಜ ಹೆರಿಗೆ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಆರೋಗ್ಯವಾಗಿದ್ದಾರೆ. ಅವಧಿ ಪೂರ್ವ ಅಂದರೆ 36 ವಾರಕ್ಕೆ ಹೆರಿಗೆಯಾದ ಕಾರಣ ಮಗುವಿನ ತೂಕ 2 ಕೆಜಿ 175 ಗ್ರಾಂ ಇದೆ. ಮಗು ಹುಟ್ಟಿದ ತಕ್ಷಣ ಅತ್ತಿದ್ದು, ಆರೋಗ್ಯವಾಗಿದೆ’ ಎಂದಿದ್ದಾರೆ.

‘ಸಹನಾ ಅವರು ನಮ್ಮ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸುತ್ತಿದ್ದರು. ಗರ್ಭ ಚೀಲ ಸಮಸ್ಯೆಯಿದ್ದ ಕಾರಣ ಪ್ರಾರಂಭದಲ್ಲೇ ಸೂಕ್ತ ಚಿಕಿತ್ಸೆ ನೀಡಲಾಗಿತ್ತು. ಆದರೆ ಎಲ್ಲರಿಗೂ ತಿಳಿದಂತೆ ನಡೆದ ಘಟನೆಯಿಂದ ಅವರು ಮಾನಸಿಕವಾಗಿ ಕುಗ್ಗಿದ್ದರು. ಆ ವೇಳೆ ಪೌಷ್ಟಿಕಾಂಶದ ಕೊರತೆ ಎದುರಾದ ಕಾರಣ ತಾಯಿ, ಮಗುವಿನ ತೂಕ ಕಡಿಮೆಯಾಗಿತ್ತು.‌ ಸಕಲ ರೀತಿಯ ಮುಂಜಾಗ್ರತೆ ಹಾಗೂ ಚಿಕಿತ್ಸೆ ನೀಡಿದ್ದರಿಂದ ಸಹಜ ಹೆರಿಗೆಯಾಗಿದೆ. ಇನ್ನೂ ನಾಲ್ಕೈದು ದಿನ ಆಸ್ಪತ್ರೆಯಲ್ಲಿ ನೋಡಿಕೊಂಡು ಬಳಿಕ ಮನೆಗೆ ಕಳುಹಿಸಲಾಗುತ್ತದೆ’ ಎಂದು ವೈದ್ಯರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!