ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 04 : ಚಲಿಸುತ್ತಿದ್ದ ಬಸ್ ಡಿಕ್ಕಿಯಾಗಿ ಓರ್ವನಿಗೆ ಗಾಯವಾದ ಘಟನೆ ನಗರದ ಪ್ರಧಾನ ಅಂಚೆ ಕಚೇರಿ ರಸ್ತೆಯಲ್ಲಿ ಸಂಭವಿಸಿದೆ.
ಇಂದು ಬೆಳಿಗ್ಗೆ 9 : 45ರ ವೇಳೆಗೆ ಪ್ರಧಾನ ಅಂಚೆ ಕಚೇರಿ ರಸ್ತೆಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ನ ಬ್ರೇಕ್ ಫೇಲ್ ಆಗಿ ಮುಂದಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಈ ಆಟೋ ಮುಂದೆಯೇ ಇದ್ದ ಮತ್ತೊಂದು ಬಸ್ ಗೆ ಡಿಕ್ಕಿ ಹೊಡೆದಿದೆ. ಈ ಎರಡೂ ಬಸ್ ಗಳ ಮಧ್ಯೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದೆ. ಆಟೋದಲ್ಲಿದ್ದ ಚಾಲಕ ಮತ್ತು ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ. ಪಾದಚಾರಿಗಳಿಗೂ ಯಾವುದೇ ತೊಂದರೆಯಾಗಿಲ್ಲ. ಇದರಿಂದ ಸಂಭವನೀಯ ದುರಂತಯೊಂದು ತಪ್ಪಿದಂತಾಗಿದೆ. ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್