ಚಿತ್ರದುರ್ಗ | ಫೆ.10ರಂದು ಗ್ರಾಮೀಣಾಭಿವೃದ್ಧಿ ಸಚಿವರ ಜಿಲ್ಲಾ ಪ್ರವಾಸ

0 Min Read

ಚಿತ್ರದುರ್ಗ,(ಫೆ.07): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಫೆ. 10ರಂದು ಜಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಿ, ಬೆ.10.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ  ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 12 ರಿಂದ 1.30ರವರೆಗೆ  ಮೆದೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮತೀರ್ಥ ಆಶ್ರಮದಲ್ಲಿ ಮಳೆ ನೀರು ಕೊಯ್ಲು ಪ್ರಯೋಗ ಅಂತರ್‍ಜಲ ಚೇತನ ಅಭಿವೃದ್ಧಿ ವೀಕ್ಷಣೆ ಮಾಡುವರು.

ನಂತರ ಮಧ್ಯಾಹ್ನ 2.30ಕ್ಕೆ  ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *