Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ : ಜುಲೈ 23ರಂದು ವಾಹನಗಳ ಬಹಿರಂಗ ಹರಾಜು

---Advertisement---

ಚಿತ್ರದುರ್ಗ. ಜುಲೈ19: ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳ ಹರಾಜು ಪ್ರಕ್ರಿಯೆಯನ್ನು ಇದೇ ಜುಲೈ 23ರಂದು ನಡೆಸಲಾಗುವುದು.

ಚಿತ್ರದುರ್ಗ ಗ್ರಾಮಾಂತರ  ಪೊಲೀಸ್   ಠಾಣೆಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡಿರುವ ವಾಹನಗಳನ್ನು ವಾಹನದ ಮಾಲೀಕರು ವಾಪಸ್ ಪಡೆದುಕೊಳ್ಳದೇ ಇರುವುದರಿಂದ 23 ಮೋಟಾರ್ ಸೈಕಲ್,  02 ಆಟೋ ಹಾಗೂ ಒಂದು ಆಲ್ಟೋ ಕಾರ್ ವಾಹನಗಳನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ಇಲಾಖಾ ಮೇಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿಕೊಂಡು ನಂತರ ಘನ ನ್ಯಾಯಾಲಯದ ಅನುಮತಿಯನ್ನು ಪಡೆದುಕೊಂಡಿದ್ದು, ಈ ವಾಹನಗಳನ್ನು ಬಹಿರಂಗ ಹರಾಜು ಪ್ರಕ್ರಿಯೆಯ ಇದೇ ಜುಲೈ 23ರಂದು ಬುಧವಾರ  ವಿಲೇವಾರಿ ಮಾಡಲು ಕ್ರಮಕೈಗೊಳ್ಳಲಾಗುವುದು.
ಆಸಕ್ತರು ರೂ.10 ಸಾವಿರ ನಗದು ಮುಂಗಡವಾಗಿ ಪಾವತಿಸಿ, ಟೋಕನ್ ಪಡೆದುಕೊಂಡು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ  ಪೊಲೀಸ್   ನಿರೀಕ್ಷಕರು, ಗ್ರಾಮಾಂತರ  ಪೊಲೀಸ್   ಠಾಣೆ, ಚಿತ್ರದುರ್ಗ ಮೊಬೈಲ್ ಸಂಖ್ಯೆ 9480803131, 9480803148 ರವರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...