ನೀಟ್ ಹಾಗೂ ಐಐಟಿ-ಜೆಇಇ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ ಎಸ್. ಆರ್. ಎಸ್. ಪಿಯು ಕಾಲೇಜು ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, (ನ.02) : ನಗರದ ಎಸ್ ಆರ್ ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು 2021ರ ನೀಟ್ ಮೆಡಿಕಲ್ ಫಲಿತಾಂಶದಲ್ಲಿ ಅತ್ಯುತ್ತಮ ರ್ಯಾಂಕ್‍ಗಳೊಂದಿಗೆ ಇತಿಹಾಸ ದಾಖಲಿಸಿದ್ದಾರೆ.

ನ.01 ರಂದು ಪ್ರಕಟಗೊಂಡ ವೈದ್ಯಕೀಯ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಕಾಲೇಜಿನ ವಿದ್ಯಾರ್ಥಿ ಕು.ಆರ್ ಶ್ರೇಯಸ್, 620 ಅಂಕಗಳೊಂದಿಗೆ ರಾಷ್ಟ್ರಮಟ್ಟದಲ್ಲಿ 1539ನೇ ಕ್ಯಾಟಗರಿ ರ್ಯಾಂಕ್ ಪಡೆದು ಜಿಲ್ಲೆಗೆ  ಕೀರ್ತಿಯನ್ನು ತಂದಿದ್ದಾರೆ.

ಅತ್ಯುತ್ತಮ ಸಾಧನೆ ಮಾಡಿದ  ಕು. ಎಲ್ ಎನ್ ನಿಹಾರಿಕ, 601 ಅಂಕಗಳೊಂದಿಗೆ ರಾಷ್ಟ್ರಮಟ್ಟದಲ್ಲಿ 7779ನೇ ಕ್ಯಾಟಗರಿ ರ್ಯಾಂಕ್ ಪಡೆದಿದ್ದಾರೆ.

ಜೆಇಇ ಮೈನ್ಸ್‍ನಲ್ಲಿ ರಾಷ್ಟ್ರಮಟ್ಟದಲ್ಲಿ 525ನೇ ರ್ಯಾಂಕ್ ಪಡೆದಿದ್ದ ಕು. ಅಮೂಲ್ಯ ಎನ್.ಪಿ. ನೀಟ್‍ನಲ್ಲೂ ರಾಷ್ಟ್ರಮಟ್ಟದ 550ನೇ ರ್ಯಾಂಕ್ ಪಡೆದಿರುವುದು ವಿಷೇಶ ಸಾಧನೆಯಾಗಿದೆ.

ಕು.ಅನುಷಾ ಜಿ. ಎಂ – 586,
ಕು.ಕೃಷ್ಣಪ್ರಸಾದ್ ಜಿ ಟಿ.- 578,
ಕು.ಅರ್ಫಾ ಎ ಆರ್- 570,
ಕು. ಶಶಾಂಕ್ ಈ – 560,
ಕು.ಹಿಮಂತ್ ರೆಡ್ಡಿ ಎಂ ಎ – 555,
ಕು. ಆಕಾಶ ಸಿ – 553,
ಕು. ಸಿಂಧು ಜಿ ಆರ್ – 540,
ಕು.ಜಗನ್ನಾಥ್ ಹೆಚ್ ಎನ್ – 540,
ಕು.ನಿಶ್ಚಿತ ಡಿ ಹೆಚ್-  526,
ಕು. ಲತಾ ಸಿ – 524,
ಕು.ಅಮೂಲ್ಯ ಎನ್ ಪಿ – 515,
ಕು.ಉದಯ್ ಕಿರಣ್ ರೆಡ್ಡಿ ಎನ್ – 515 ಹಾಗೂ ಕು.ಎರ್ರಿಸ್ವಾಮಿ ಬಿ – 502,

ಅಂಕಗಳನ್ನು ಪಡೆದು ಮೊದಲ ಸುತ್ತಿನಲ್ಲಿಯೆ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಪಡೆದುಕೊಳ್ಳಲು ಅರ್ಹರಾಗಿದ್ದಾರೆ. ಇವರಲ್ಲದೆ ಇತರೆ 21 ವಿದ್ಯಾರ್ಥಿಗಳು 450ಕ್ಕಿಂತ ಅಧಿಕ ಅಂಕಗಳಿಸಿದ್ದು, ಇವರೆಲ್ಲರೂ ವಿವಿಧ ಮೀಸಲಾತಿಗಳಡಿಯಲ್ಲಿ ವೈದ್ಯಕೀಯ ಸೀಟುಗಳನ್ನು ಪಡೆದುಕೊಳ್ಳಲಿದ್ದಾರೆ.

ಇದರೊಂದಿಗೆ ಎಸ್ ಆರ್ ಎಸ್ ಕಾಲೇಜೊಂದರಲ್ಲೇ 37ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಎಂಬಿಬಿಎಸ್ ಸೀಟು, 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯುರ್ವೇದ ಹಾಗೂ ಇತರೆ ಭಾರತೀಯ ವೈದ್ಯಕೀಯ ಪದ್ಧತಿಯ ಸೀಟುಗಳನ್ನು ಪಡೆದುಕೊಳ್ಳಲಿದ್ದಾರೆ.

2021ರ ನೀಟ್ ಪ್ರವೇಶ ಪರೀಕ್ಷೆ ಅರ್ಹತೆ ಗಳಿಸಿದವರ ಒಟ್ಟು ಸಂಖ್ಯೆ 178. ಹಾಗೂ ಕಳೆದೆರಡು ವರ್ಷಗಳಿಂದ IIಖಿ ಗೆ ಪ್ರವೇಶ ಪಡೆದವರು 5 ಮತ್ತು ಓIಖಿ ಗೆ 12 ವಿದ್ಯಾರ್ಥಿಗಳು ಓಂಖಿಂ ಗೆ  24,  ಓಆಂ ಗೆ 01   Iಅಂಖ ಗೆ  36 ವಿದ್ಯಾರ್ಥಿಗಳು ಪ್ರವೇಶಾರ್ಹತೆ ಪಡೆಯುವುದರ ಮೂಖಾಂತರ ಮಧ್ಯ ಕರ್ನಾಟಕದಲ್ಲಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅದ್ವಿತೀಯ ಫಲಿತಾಂಶ ನೀಡಿದ ಅತ್ಯುತ್ತಮ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಜೆಇಇ ಅಡ್ವಾನ್ಸ್ ನಲ್ಲಿ ರಾಷ್ಟ್ರಮಟ್ಟzಲ್ಲಿ ಸತತ ಎರಡು ವರ್ಷಗಳಿಂದ ಅದ್ವಿತೀಯ ಸಾಧನೆಯೊಂದಿಗೆ    ಅತ್ಯುತ್ತಮ ರ್ಯಾಂಕ್‍ಗಳಿಸಿ ಗಮನ ಸೆಳೆದಿದ್ದ ಬೆನ್ನಲ್ಲೇ ‘ನೀಟ್’ನಲ್ಲೂ ಕೂಡ ಅಮೋಘ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿಯವರು ಅಭಿನಂದನೆಗಳನ್ನು ಸಲ್ಲಿಸಿ ವೈದ್ಯಕೀಯ ಮಹಾದಾಸೆ ಇದ್ದು ಈ ವರ್ಷ ಈಡೇರುವ ಸಾಧ್ಯತೆಗಳಿಲ್ಲದ ವಿದ್ಯಾರ್ಥಿಗಳಿಗೆ ನಾಳೆಯಿಂದಲೇ ಎಸ್.ಆರ್.ಎಸ್ ಕಾಲೇಜಿನಲ್ಲಿ ಪ್ರಾರಂಭವಾಗುವ ನೀಟ್ ಲಾಂಗ್‍ಟರ್ಮ್ ಕೋಚಿಂಗ್ ಉಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಸಾಧನೆಗೈದ ಎಲ್ಲ ವಿದ್ಯಾರ್ಥಿಗಳಿಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಆಡಳಿತಾಧಿಕಾರಿಗಳಾದ ಡಾ.ರವಿ ಟಿ.ಎಸ್. ಪ್ರಾಂಶುಪಾಲರಾದ ಶ್ರೀ ಗಂಗಾಧರ್ ಈ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago