Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಅನಧಿಕೃತ ಕಬ್ಬಿಣದ ಅದಿರು ಸಾಗಾಣಿಕೆ ವಾಹನಗಳ ವಶ

---Advertisement---

ಚಿತ್ರದುರ್ಗ. ಜುಲೈ04 : ಅನಧಿಕೃತವಾಗಿ ಕಬ್ಬಿಣದ ಅದಿರು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಚಳ್ಳಕೆರೆಯಲ್ಲಿ ಬುಧವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಡಾ.ಎಂ.ಜೆ.ಮಹೇಶ್, ಹಿರಿಯ ಭೂ ವಿಜ್ಞಾನಿ ಕೆ.ಎಸ್.ನಾಗೇಂದ್ರಪ್ಪ ಅವರ ನೇತೃತ್ವದಲ್ಲಿ ಭೂ ವಿಜ್ಞಾನಿಗಳಾದ ಬಿ.ಎನ್.ಉಮಾಪತಿ ಮತ್ತು ಪಿ.ಮಂಜಪ್ಪ ಹಾಗೂ ಸಿಬ್ಬಂದಿಗಳಾದ ಚೇತನ್ ಮತ್ತು ಜಾಕೀರ್ ಅವರೊಂದಿಗೆ ಗಸ್ತು ಕಾರ್ಯ ನಡೆಸಿ ಅನಧಿಕೃತವಾಗಿ ಕಬ್ಬಿಣದ ಅದಿರು ಸಾಗಾಣಿಕೆ ಮಾಡುತ್ತಿದ್ದ ಮೂರು ವಾಹನಗಳನ್ನು ವಶಪಡಿಸಿಕೊಂಡು ಚಳ್ಳಕೆರೆ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದೆ.

ಎಂ.ಎಂ (ಆರ್ ಅಂಡ್ ಡಿ) ಆಕ್ಟ್ 1957ರಂತೆ ವಾಹನಗಳ ಮಾಲೀಕರು, ಚಾಲಕರು ಹಾಗೂ ಇದಕ್ಕೆ ಭಾಗಿಯಾಗಿರುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment