Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬಸವೇಶ್ವರರ ಜಯಂತಿ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಮೇ. 10 : ರಕ್ತದಾನ ಆರೋಗ್ಯಕ್ಕೆ ಪೂರಕ. ಮಾರಕವಲ್ಲ ಎಂದು ಕಲ್ಕೆರೆ ಮಠದ ಬಸವಲಿಂಗಸ್ವಾಮಿ ಹೇಳಿದರು.

ವೀರಶೈವ ಸಮಾಜ, ಪ್ರಥಮ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಸಹಯೋಗದೊಂದಿಗೆ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಸಾಂಸ್ಕøತಿಕ ನಾಯಕ ವಿಶ್ವಗುರು  ಬಸವಣ್ಣನವರ ಜಯಂತಿ ಪ್ರಯಕ್ತ ಏರ್ಪಡಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಗಾಟಿಸಿ ಮಾತನಾಡಿದರು.

ಯುವಕ-ಯುವತಿಯರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವುದರಿಂದ ಅಮೂಲ್ಯವಾದ ಜೀವ ಉಳಿಯುತ್ತದೆ. ಕೆಟ್ಟ ಹವ್ಯಾಸಗಳನ್ನು ಕಲಿಯುವ ಬದಲು ರಕ್ತದಾನ ಮಾಡುವುದು ಒಳ್ಳೆಯದು. ದಿನ ದಿನಕ್ಕೂ ರಕ್ತದ ಅವಶ್ಯಕತೆಯಿದೆ. ಮಾನವನ ಶರೀರದ ಎಲ್ಲಾ ಅಂಗಾಂಗಗಳು ಭಗವಂತ ಕೊಟ್ಟ ವರ ಎಂದು ತಿಳಿಸಿದರು.


ಹನ್ನೆರಡನೆ ಶತಮಾನದ ಬಸವಣ್ಣನವರು ಸಮ ಸಮಾಜಕ್ಕಾಗಿ ಹೋರಾಡಿದವರು. ಅಂತಹವರ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಪಾಲಿಸಬೇಕಿದೆ. ರಕ್ತದಾನ ಮಾಡಲು ಕೆಲವರು ಹಿಂಜರಿಯುತ್ತಾರೆ. ರಕ್ತದಾನದ ಕುರಿತು ಎಲ್ಲರಲ್ಲಿಯೂ ಅರಿವು ಮೂಡಿಸಬೇಕಿದೆ ಎಂದರು.

ಜಿಲ್ಲಾ ರೆಡ್‍ಕ್ರಾಸ್ ಉಪ ಸಭಾಪತಿ ಅರುಣ್‍ಕುಮಾರ್ ಮಾತನಾಡಿ ಚಿತ್ರದುರ್ಗದಲ್ಲಿ ಎರಡು ಹೆದ್ದಾರಿಗಳು ಹಾದು ಹೋಗಿರುವುದರಿಂದ ಅಪಘಾತಗಳು ಹೆಚ್ಚು ಸಂಭವಿಸುತ್ತಿರುತ್ತವೆ. ಹೆರಿಗೆ ಸಮಯದಲ್ಲಿ ರಕ್ತದ ಅವಶ್ಯಕತೆ ತುಂಬಾ ಮುಖ್ಯ. ರಕ್ತಕ್ಕೆ ಪರ್ಯಾಯ ಯಾವುದೂ ಇಲ್ಲ. ಆದ್ದರಿಂದ ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವವರ ಪ್ರಾಣ ಉಳಿಸಬೇಕೆಂದು ಹೇಳಿದರು.

ರಕ್ತ ನೀಡಿದರೆ ನಿಶ್ಯಕ್ತಿಯಾಗುತ್ತದೆನ್ನುವ ತಪ್ಪು ಕಲ್ಪನೆ ಸರಿಯಲ್ಲ. ಆರೋಗ್ಯವಂತ ಪುರುಷರು ಮೂರು ತಿಂಗಳಿಗೊಮ್ಮೆ, ಮಹಿಳೆಯರು ನಾಲ್ಕು ತಿಂಗಳಿಗೊಂದು ಸಾರಿ ರಕ್ತದಾನ ಮಾಡಬಹುದು. ಒಬ್ಬರ ರಕ್ತದಿಂದ ಮೂವರ ಪ್ರಾಣ ಉಳಿಯುತ್ತದೆ. ರಕ್ತದಾನದಿಂದ ಹೃದಯ ಸಂಬಂಧಿ ಕಾಯಿಲೆ ದೂರವಾಗಿ ಕೊಬ್ಬಿನಂಶ ಕಡಿಮೆಯಾಗುತ್ತದೆ ಎಂದು ರಕ್ತದಾನದ ಮಹತ್ವ ತಿಳಿಸಿದರು.

ಕಡ್ಲೆಗುದ್ದು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹೇಶ್, ಕೀರ್ತಿಕುಮಾರ್, ಚಂದ್ರಕಲ, ದೀಪಿಕ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...