Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ನಗರಸಭೆ ಉಪಾಧ್ಯಕ್ಷೆ ಸ್ಥಾನಕ್ಕೆ ಶಕೀಲಾಬಾನು ಆಯ್ಕೆ

---Advertisement---

ಚಿತ್ರದುರ್ಗ. ಜುಲೈ28: ಚಿತ್ರದುರ್ಗ ನಗರಸಭೆಯ ಉಪಾಧ್ಯಕ್ಷೆಯಾಗಿ 12ನೇ ವಾರ್ಡ್ ಸದಸ್ಯೆ ಶಕೀಲಾಬಾನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶ್ರೀದೇವಿ ಜಿ.ಎಸ್ ಅವರ ರಾಜೀನಾಮೆಯಿಂದ ತೆರವಾದ ನಗರಸಭೆ ಉಪಾಧ್ಯಕ್ಷೆ ಸ್ಥಾನದ ಆಯ್ಕೆಗೆ ಸೋಮವಾರ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಚುನಾವಣೆ ನಡೆಯಿತು.

ಶಕೀಲಾ ಬಾನು ಅವರು ನಗರಸಭೆ ಅಧ್ಯಕ್ಷೆ ಸಮಿತಾ ಬಿ.ಎನ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸುರುಲ್ಲಾ ಸೇರಿದಂತೆ ಇತರೆ ಸದಸ್ಯರೊಂದಿಗೆ ಆಗಮಿಸಿ ಉಪಾಧ್ಯಕ್ಷೆ ಸ್ಥಾನದ ಆಯ್ಕೆಗೆ ನಾಮಪತ್ರ ಸಲ್ಲಿಸಿದರು. ಚುನಾವಣೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ನಾಮಪತ್ರ ಸ್ವೀಕರಿಸಿ, ನಾಮಪತ್ರದ ಪರಿಶೀಲನೆ ಕಾರ್ಯ ನಡೆಸಿದರು.

ನಿಗಧಿಪಡಿಸಿದ ಅವಧಿಯೊಳಗೆ ಬೇರೆ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಶಕೀಲಾ ಬಾನು ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ  ಮೆಹಬೂಬ್ ಜಿಲಾನಿ ಖುರೇಷಿ ಘೋಷಿಸಿದರು. ಈ ವೇಳೆ ನಗರ ಸಭೆ ಪೌರಾಯಕ್ತೆ ಎಂ.ರೇಣುಕಾ ಉಪಸ್ಥಿತರಿದ್ದರು.

35 ವಾರ್ಡ್‍ಗಳ ಚುನಾಯಿತ ಸದಸ್ಯರು ಹಾಗೂ ಸ್ಥಳೀಯ ವಿಧಾನಸಭೆ ಶಾಸಕ ಮತ್ತು ಲೋಕಸಭಾ ಸಂಸದರು ಸೇರಿ ಒಟ್ಟು 37 ಸದಸ್ಯರ ಸಂಖ್ಯಾ ಬಲವನ್ನು ಚಿತ್ರದುರ್ಗ ನಗರಸಭೆ ಹೊಂದಿದೆ. ಇದರಲ್ಲಿ ಒಟ್ಟು 9 ಸದಸ್ಯರು ಉಪಾಧ್ಯಕ್ಷರ ಚುನಾವಣೆ ಸಭೆಗೆ ಗೈರು ಹಾಜರಾಗಿದ್ದರು. ನೂತನವಾಗಿ ಉಪಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆಯಾದ ಶಕೀಲಾ ಬಾನು ಅವರಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ನಗರಸಭೆ ಅಧ್ಯಕ್ಷೆ ಸಮಿತಾ ಬಿ.ಎನ್. ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸುರುಲ್ಲಾ ಸೇರಿದಂತೆ ಸದಸ್ಯರು ಅಭಿನಂದಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment