Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸೆಪ್ಟೆಂಬರ್ 19 ರವರೆಗೂ ಶ್ರೀ ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ : ಪೂಜಾ ಕಾರ್ಯಕ್ರಮಗಳ ವಿವರ…!

---Advertisement---

 

ಸುದ್ದಿಒನ್, ಚಿತ್ರದುರ್ಗ,ಸೆಪ್ಟೆಂಬರ್.14: ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀ ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಸಂಜೆ ಅಮ್ಮನವರಿಗೆ ಮದಲಿಂಗಿತ್ತಿ ಶಾಸ್ತ್ರ ನೆರವೇರಿಸಲಾಯಿತು.

ಸೆ.13 ರಿಂದ 19 ರವರೆಗೆ ಜಾತ್ರಾ ಮಹೋತ್ಸವ ಆಯೋಜಿಸಿದ್ದು, ಶುಕ್ರವಾರ ಮದಲಿಂಗಿತ್ತಿ ಶಾಸ್ತ್ರ ಕಂಕಣಧಾರಣೆ ಸೇರಿದಂತೆ ಮತ್ತಿತರ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಪ್ರಯುಕ್ತ ಗರ್ಭಗುಡಿ ಹಾಗೂ ಉತ್ಸವ ಮೂರ್ತಿಗಳಿಗೆ ಆಭರಣಗಳು ಸೇರಿದಂತೆ ಬಗೆ ಬಗೆಯ ಪುಷ್ಪಗಳಿಂದ ಮನಮೋಹಕವಾಗಿ ಅಲಂಕರಿಸಲಾಗಿತ್ತು. ಪೂಜೆಯ ನಂತರ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಸೆ.16 ರ ರಾತ್ರಿ 11 ಕ್ಕೆ ಹೊಳೆಪೂಜೆ, ಸೆ.17 ರ ಬೆಳಗ್ಗೆ 6 ರಿಂದ ರಾತ್ರಿ 9 ರವರೆಗೆ ಹಿಟ್ಟಿನ ಆರತಿ ಮತ್ತು ಬೇವಿನ ಸೀರೆ ಹರಕೆ ಕಾರ್ಯಕ್ರಮ. ಸೆ.18 ರ ರಾತ್ರಿ 8 ಕ್ಕೆ ಅಗ್ನಿಕುಂಡ ಕಾರ್ಯಕ್ರಮ ಸೆ.19 ರ ಬೆಳಗ್ಗೆ 11 ಕ್ಕೆ ಓಕಳಿ ಸೇವೆ ಮತ್ತು ಮುರುಘರಾಜೇಂದ್ರ ಮಠಕ್ಕೆ ತೆರಳಿ ರಾಜ ಬೀದಿಗಳಲ್ಲಿ ಮೆರೆವಣಿಗೆ ಮುಖಾಂತರ ರಾತ್ರಿ 11 ಕ್ಕೆ ದೇವಿಯ ಗರ್ಭಗುಡಿ ಪ್ರವೇಶ ಕಾರ್ಯಕ್ರಮಗಳು ಜರುಗಲಿವೆ ಎಂದು ಜಾತ್ರಾ ಮಹೋತ್ಸವ ಹಾಗೂ ದೇವಸ್ಥಾನದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಈ.ಚಂದ್ರಶೇಖರ್, ಉಪಾಧ್ಯಕ್ಷ ಜೆ.ಎಸ್.ಗುರುಮೂರ್ತಿ, ಕಾರ್ಯದರ್ಶಿ ಓ.ಬಿ.ಬಸವರಾಜಪ್ಪ, ಖಜಾಂಚಿ ಸಿ.ಎನ್.ಬಾಬು, ಸದಸ್ಯರಾದ ಜಿ.ರವಿಕುಮಾರ್, ಬಾಲಾಜಿ, ಕಿರಣ್, ರಂಗಣ್ಣ, ರಾಜು, ವಿವೇಕಾನಂದ, ನಂದನ್, ದೇವರಾಜ್ ಸಿದ್ದಣ್ಣ, ಧರ್ಮಣ್ಣ, ಲಚಿಕೇತನ್ (ಅಂಜು) ಅರ್ಚಕ ಟಿ.ಗಂಗಾರಪ್ಪ ಮತ್ತು ಸಹೋದರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment