Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 26 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಕೃಷ್ಣಜನ್ಮಾಷ್ಠಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಕೃಷ್ಣ ಜನ್ಮಾಷ್ಟಮಿಯನ್ನು ಭಾರತ ಮತ್ತು ಪ್ರಪಂಚದ ವಿವಿಧ ಭಾಗಗಳಲ್ಲಿ ಬಹಳ ಸಂತೋಷ ಮತ್ತು ವೈಭವದಿಂದ ಆಚರಿಸಲಾಗುತ್ತದೆ. ಜನ್ಮಾಷ್ಟಮಿ ಎಂಬ ಪದವು ಎರಡು ಪದಗಳಿಂದ ಕೂಡಿದೆ. ‘ಜನ್ಮ’ ಎಂದರೆ ಜನ್ಮ ಮತ್ತು ‘ಅಷ್ಟಮಿ’ ಎಂದರೆ ಎಂಟು ಮತ್ತು ಅದು ಭಾದ್ರಪದ ಮಾಸದ ಅಂಧಕಾರದ ಹದಿನೈದು ದಿನದ ಎಂಟನೆಯ ದಿನವಾಗಿದ್ದು ಭಗವಾನ್ ಕೃಷ್ಣನು ಜನಿಸಿದನು. ಜನಪ್ರಿಯ ಹಬ್ಬವನ್ನು ಗೋಕುಲಾಷ್ಟಮಿ ಮತ್ತು ಶ್ರೀ ಕೃಷ್ಣ ಜಯಂತಿ ಎಂದೂ ಕರೆಯುತ್ತಾರೆ. ಭಗವಾನ್ ಕೃಷ್ಣನ ಜನ್ಮ ಕ್ಷಣವನ್ನು ಗುರುತಿಸಲು ಮಧ್ಯರಾತ್ರಿಯ ಆಚರಣೆಗಳಿಗಾಗಿ ಶ್ರೀಕೃಷ್ಣನ ದೇವಾಲಯಗಳನ್ನು ಹೂವುಗಳಿಂದ ಅಲಂಕರಿಸಲಾಗುತ್ತದೆ.

ಕೃಷ್ಣಜನ್ಮಾಷ್ಠಮಿಯ ಪ್ರಯುಕ್ತ ಸಂಸ್ಥೆಯ ನಿರ್ದೇಶಕರಾದ ಶ್ರೀ ಎಸ್ ಎಂ ಪೃಥ್ವೀಶ ಸರ್ ಅವರು ಮಾತನಾಡುತ್ತಾ ಕೃಷ್ಣನು ಜಗದೋದ್ಧಾರಕನಾಗಿದ್ದು, ಆತನ ಕೃಪಾಕಟಾಕ್ಷ ಎಲ್ಲ್ಲರಿಗೂ ಬೇಕು. ಸನ್ಮಾರ್ಗದಲ್ಲಿ ನಡೆಯುವವರಿಗೆ ಆತನು ಬೆಳಕನ್ನು ತೋರಿಸುತ್ತಾನೆ. ಹಾಗೂ ಭಗವಂತನಾದ ಶ್ರೀಕೃಷ್ಣನು ಮಾನವ ಜನ್ಮದ ಉದ್ಧಾರಕ್ಕಾಗಿಯೇ ಆವತರಿಸಿ ಬಂದು ಬದುಕಿಗೆ ದಾರಿದೀಪವಾಗಿದ್ದಾನೆ ಎಂದು ಹೇಳಿದರು.

ಸಂಸ್ಥೆಯ ಐಸಿಎಸ್‍ಇ ಪ್ರಿನ್ಸಿಪಾಲರಾದ ಬಸವರಾಜಯ್ಯ.ಪಿ, ಅವರು ಮಾತನಾಡುತ್ತಾ ಶ್ರೀ ವಿಷ್ಣುವಿನ ದಶ ಅವತಾರಗಳಲ್ಲಿ ಶ್ರೀ ಕೃಷ್ಣನ ಅವರತಾರವು ಬಹಳ ವಿಶೇಷವಾದದ್ದು ಹಾಗೂ ಜಗತ್ತಿಗೆ ಮಾದರಿಯಾಗುವಂತಹದ್ದು, ಅದರಲ್ಲೂ ಕೃಷ್ಣ ಬಾಲ ಲೀಲೆಗಳು, ಹಾಗೂ ಕೃಷ್ಣನ ಲೀಲೆಗಳು ಅಪರಿಮಿತ/ಅಗಣಿತವಾಗಿವೆ ಎಂದರು. ಸಂಸ್ಥೆಯ ಮುಖ್ಯ ಶಿಕ್ಷಕರಾದ  ತಿಪ್ಪೇಸ್ವಾಮಿ ಎನ್ ಜಿ, ಅವರು ಮಾತನಾಡುತ್ತಾ ಕೃಷ್ಣನು ಜಗತ್ತನ್ನು ಸಲಹುವಾತನು. ಕಷ್ಟ ಕಾರ್ಪಣ್ಯಗಳ ನಿವಾರಕನು. ಈತನ ದಯೆ ಇದ್ದರೆ ಜಗತ್ತನ್ನೇ ಗೆಲ್ಲಬಹುದು ಎಂದರು.

ಶ್ರೀ ಕೃಷ್ಣಜನ್ಮಾಷ್ಟಮಿಯ ಅಂಗವಾಗಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಪುಟ್ಟ ಮಕ್ಕಳು ಬಣ್ಣ ಬಣ್ಣದ ಕೃಷ್ಣ ರಾಧೇಯ ವೇಷವನ್ನು ಧರಿಸಿ ನೃತ್ಯ ಮಾಡಿ ಮಕ್ಕಳನ್ನು ಪೋಷಕರನ್ನು ರಂಜಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಐಸಿಎಸ್‍ಇ ಉಪ ಪ್ರಿನ್ಸಿಪಾಲರಾದ ಅವಿನಾಶ್ ಬಿ ಹಾಗೂ ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...