Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮಾರ್ಚ್ 17 ರಿಂದ ಶಿವಸಂಚಾರ ನಾಟಕೋತ್ಸವ

Facebook
Twitter
Telegram
WhatsApp

ಚಿತ್ರದುರ್ಗ : ಪಿಳ್ಳೆಕೆರೇನಹಳ್ಳಿಯ ಬಾಪೂಜಿ ವಿದ್ಯಾಸಂಸ್ಥೆಯ ಆವರಣದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ರಂಗಸೌರಭ ಕಲಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಾಪೂಜಿ ಸಮೂಹ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 17ರಿಂದ 19 ರವರೆಗೆ ಪ್ರತೀದಿನ ಸಂಜೆ 6-30 ಗಂಟೆಗೆ ಸಾಣೇಹಳ್ಳಿ ಶ್ರೀ ಶಿವಕುಮಾರ ಕಲಾ ಸಂಘದ ಶಿವಸಂಚಾರ ನಾಟಕೋತ್ಸವ -2022 ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಮಾರ್ಚ್ 17ರಂದು ಸಂಜೆ 6-30 ಗಂಟೆಗೆ ಚಂದ್ರಶೇಖರ ತಾಳ್ಯ ವಿರಚಿತ ಒಕ್ಕಲಿಗರ ಮುದ್ದಣ್ಣ ನಾಟಕವು ಛಾಯಾಭಾರ್ಗವಿ ನಿರ್ದೇಶನದಲ್ಲಿ ಸಾಣೇಹಳ್ಳಿ ಶಿವಸಂಚಾರ ಕಲಾವಿದರು ಅಭಿನಯಿಸುವರು. ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ ಹಾಗೂ ಸಂಶೋಧಕ ಪ್ರೊ.ಶ್ರೀಶೈಲ ಆರಾಧ್ಯ ಹಾಗೂ ಸಾಹಿತಿ ಚಂದ್ರಶೇಖರ ತಾಳ್ಯ ಇವರನ್ನು ಸನ್ಮಾನಿಸಲಾಗುವುದು.

ಮಾರ್ಚ್ 18ರಂದು ಸಂಜೆ 6-30 ಗಂಟೆಗೆ ಲಿಂಗದೇವರು ಹಳೆಮನೆ ರಚಿಸಿದ ಗಡಿಯಂಕ ಕುಡಿಮುದ್ದ ನಾಟಕವು ಆರ್.ಜಗದೀಶ್ ನಿರ್ದೇಶನದಲ್ಲಿ ಸಾಣೇಹಳ್ಳಿ ಶಿವಸಂಚಾರ ಕಲಾವಿದರು ಅಭಿನಯಿಸುವರು ಹಾಗೂ ಹೆಚ್.ಎಸ್.ದ್ಯಾಮೇಶ್ ವಿರಚಿತ ವಸುಂಧರೆ ನಾಟಕವು ವೈ.ಡಿಬದಾಮಿ ನಿರ್ದೇಶನದಲ್ಲಿ ಮಂಜುಳ ಬದಾಮಿ ಅಭಿನಯಿಸುವರು.

ಇದೇ ಸಂದರ್ಭದಲ್ಲಿ ಮಂಜುಳ ವೈ.ಡಿ.ಬದಾಮಿ ದಂಪತಿಗಳನ್ನು ಸನ್ಮಾನಿಸಲಾಗುವುದು.

ಮಾರ್ಚ್ 19ರಂದು ಸಂಜೆ 6-30 ಗಂಟೆಗೆ ಬಿ.ಆರ್.ಅರಷಿನಗೋಡಿ ರಚಿಸಿದ ಬಸ್ ಕಂಡಕ್ಟರ್ ನಾಟಕವು ವೈ.ಡಿಬದಾಮಿ ನಿರ್ದೇಶನದಲ್ಲಿ ಸಾಣೇಹಳ್ಳಿ ಶಿವಸಂಚಾರ ಕಲಾವಿದರು ಅಭಿನಯಿಸುವರು.

ಇದೇ ಸಂದರ್ಭದಲ್ಲಿ ಗಾನಯೋಗಿ ಸಂಗೀತ ಪರಿಷತ್ತಿನ ಜಿಲ್ಲಾಧ್ಯಕ್ಷ ತೋಟಪ್ಪ ಉತ್ತಂಗಿ ಇವರನ್ನು ಸನ್ಮಾನಿಸಿ ಗೌರವಿಸಲಾಗುವುದು.
ಮೂರೂ ದಿನ ನಡೆಯುವ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾ ಸಂಘದ ಶಿವಸಂಚಾರ ನಾಟಕೋತ್ಸವ -2022 ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಿ ಎಂದು ರಂಗನಿರ್ದೇಶಕ ಕೆ.ಪಿ.ಎಮ್.ಗಣೇಶಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!