Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಅಮಿತ್‍ಷಾ ರಾಜೀನಾಮೆಗೆ ಸಾಮಾಜಿಕ ಸಂಘರ್ಷ ಸಮಿತಿ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 21 : ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಹೆಸರು ಜಪಿಸುವ ಬದಲು ದೇವರ ಸ್ಮರಣೆ ಮಾಡಿದರೆ ಸ್ವರ್ಗ ಪ್ರಾಪ್ತಿಯಾಗುತ್ತದೆಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್‍ಷಾ ವಿರುದ್ದ ಸಾಮಾಜಿಕ ಸಂಘರ್ಷ ಸಮಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಅಮಿತ್‍ಷಾ ರಾಜಿನಾಮೆಗೆ ಒತ್ತಾಯಿಸಿದರು.

 

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪ್ರೊ.ಸಿ.ಕೆ.ಮಹೇಶ್ ದೇಶದ ಐಕ್ಯತೆಗೆ ಪೆಟ್ಟು ಕೊಡುವಂತ ಮಾತುಗಳನ್ನಾಡಿರುವ ಅಮಿತ್‍ಷಾ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಶೋಷಿತರು, ಮಹಿಳೆಯರನ್ನು ದಿಕ್ಕುತಪ್ಪಿಸಲು ಹೊರಟಂತಿದೆ. ಬ್ರಾಹ್ಮಣ್ಯ ಆಳ್ವಿಕೆ ಆರಂಭದಲ್ಲಿ ನಮ್ಮ ದೇಶ ವಿಭಜನೆಯಾಯಿತು. ಈಗ ಮತ್ತೊಮ್ಮೆ ಅಂತಹ ಆಳ್ವಿಕೆ ಶುರುವಾಗುವ ವಾತಾವರಣವಿದೆ. ಅಖಂಡ ಭಾರತ ಉಳಿಯಬೇಕಾಗಿರುವುದರಿಂದ ಎಲ್ಲರೂ ಒಗ್ಗೂಡಬೇಕಿದೆ ಎಂದರು.
ಅಮಿತ್‍ಷಾ ಹೇಳಿಕೆ ದೇವರು, ಧರ್ಮದ ಹೆಸರಿನಲ್ಲಿ ಹೊಸ ಚಿಂತನೆ, ಚಳುವಳಿಗೆ ಬುನಾದಿ ತೋಡಿದಂತೆ ಕಾಣುತ್ತಿದೆ. ಕಾಂಗ್ರೆಸ್ ಅಂಬೇಡ್ಕರ್‍ರವರನ್ನು ಚುನಾವಣೆಯಲ್ಲಿ ಸೋಲಿಸಿತು ಎಂದು ಕೋಮುವಾದಿ ಬಿಜೆಪಿ. ಅಪ ಪ್ರಚಾರದಲ್ಲಿ ತೊಡಗಿರುವುದರ ವಿರುದ್ದ ದಲಿತರು ಜಾಗೃತಿಗೊಳ್ಳಬೇಕಿದೆ. ಬ್ರಾಹ್ಮಣ್ಯ ಸಿದ್ದಾಂತದ ವಿರುದ್ದ ನಮ್ಮ ಹೋರಾಟವಿರಬೇಕೆಂದು ಹೇಳಿದರು.

 

ಸಾಮಾಜಿಕ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಕೆ.ಕುಮಾರ್, ಪ್ರಧಾನ ಕಾರ್ಯದರ್ಶಿ ಸಿ.ಎ.ಚಿಕ್ಕಣ್ಣ, ಡಿ.ದುರುಗೇಶ್, ಎಂ.ರಾಮಾಂಜನೇಯ, ಆರ್.ರಾಮಲಿಂಗಪ್ಪ, ಕೆ.ಕೃಷ್ಣಮೂರ್ತಿ
ಡಿ.ಯಲ್ಲಪ್ಪ, ಹೊಳೆಯಪ್ಪ, ಹನುಮಂತಪ್ಪ ದುರ್ಗ, ನ್ಯಾಯವಾದಿಗಳಾದ ಡಿ.ವೆಂಕಟೇಶ್, ಎಲ್.ಸುರೇಶ್, ದಲಿತ ಮುಖಂಡ ಬಿ.ರಾಜಣ್ಣ ಇನ್ನು ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...