ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂ.10 : ಧವಳಗಿರಿ ಬಡಾವಣೆಯಲ್ಲಿರುವ ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದಲ್ಲಿ ಹನ್ನೊಂದನೆ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಸೋಮವಾರ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಕ್ಷಿಪ್ರ ಪ್ರಸಾದ ಮಹಾಗಣಪತಿಗೆ ಪಂಚಾಮೃತ ಸಹಿತ ರುದ್ರಾಭಿಷೇಕ, ನವಗ್ರಹ ಪುರಸ್ಸರ ಅಷ್ಟದ್ರವ್ಯ ಮಹಾಗಣಪತಿ ಹೋಮ, ಪೂರ್ಣಾಹುತಿ, ಅಲಂಕಾರ ನಂತರ ಮಹಾಮಂಗಳರಾತಿ ನಡೆಯಿತು.
ಸಂಜೆ ದವಳಗಿರಿ ಬಡಾವಣೆ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನೆರವೇರಿತು.
ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಭದ್ರಿನಾಥ್, ಶ್ರೀನಿವಾಸ್, ಗುರುಮೂರ್ತಿ, ಚನ್ನಕೇಶವುಲು ಸೇರಿದಂತೆ ಸಾವಿರಾರು ಭಕ್ತರು ಸೇರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















