Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಕನ್ನಡ ಕೌಸ್ತುಭ’ ಮತ್ತು ‘ಸರಸ್ವತಿ ಪ್ರಶಸ್ತಿಗೆ ಸುಮಿತ್ರ ಆಯ್ಕೆ

---Advertisement---

ಸುದ್ದಿಒನ್,ಚಿತ್ರದುರ್ಗ, ಜುಲೈ. 08 : ತಾಲ್ಲೂಕಿನ ಬಂಗಾರಕ್ಕನಹಳ್ಳಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ ಕು. ಸುಮಿತ್ರ ಎಸ್. ರೆಡ್ಡಿಯವರು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಅತ್ಯುತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಕಲಾಕುಂಚ ಸಂಸ್ಥೆಯು ರಾಜ್ಯಮಟ್ಟದ ‘ಕನ್ನಡ ಕೌಸ್ತುಭ’ ಮತ್ತು ‘ಸರಸ್ವತಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

ಶ್ರೀ ಶ್ರೀನಿವಾಸ ರೆಡ್ಡಿ ಜೆ.ಟಿ. ಮತ್ತು ಶ್ರೀಮತಿ ತಿಪ್ಪಮ್ಮಕೆ ಸಿ. ದಂಪತಿಗಳ ಸುಪುತ್ರಿಯಾಗಿರುವ ಕು.ಸುಮಿತ್ರ ಅವರು ನಾಯಕನಹಟ್ಟಿಯ ವಿದ್ಯಾ ವಿಕಾಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ವರ್ಷದ ಎಸ್.ಎಸ್.ಎಲ್.ಸಿ.ಯಲ್ಲಿ ಅವರು ಇಡೀ ವಿಷಯಗಳಲ್ಲಿ ಬಹಳ ಉತ್ತಮ ಅಂಕಗಳನ್ನು ಗಳಿಸಿದ್ದಾರೆ.

ಕನ್ನಡದಲ್ಲಿ ಪೂರ್ಣ ಅಂಕ ಪಡೆದಿರುವುದು, ಭಾಷೆಯ ಮೇಲಿನ ಅವರ ಮೆಚ್ಚುಗೆ ಹಾಗೂ ಶ್ರಮದ ಸಫಲತೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಸುಮಿತ್ರ ಅವರ ಈ ಸಾಧನೆಗೆ ಶಾಲಾ ಮುಖ್ಯಗುರುಗಳು, ಶಿಕ್ಷಕವೃಂದ, ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ. ಇತರ ವಿದ್ಯಾರ್ಥಿಗಳಿಗೆ ಅವರು ಸ್ಪೂರ್ತಿದಾಯಕ ಉದಾಹರಣೆಯಾಗಿದ್ದಾರೆ.

ಕಲಾಕುಂಚ ಸಂಸ್ಥೆಯು 2025ರ ಜುಲೈ 20ರಂದು, ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ, ಹಮ್ಮಿಕೊಂಡಿರುವ ಸಮಾರಂಭದಲ್ಲಿ ಸುಮಿತ್ರ ಅವರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಕೆ. ಹೆಚ್. ಮಂಜುನಾಥ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...