ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 10 : ನಗರದ ಜೆಸಿಆರ್.ಬಡಾವಣೆ 2 ನೇ ಕ್ರಾಸ್ ನಿವಾಸಿ ನಗರಸಭೆ ಮಾಜಿ ಸದಸ್ಯ ಸೈಯದ್ ಅಶ್ವಕ್ಅಹಮದ್ ಬುಧವಾರ ಬೆಳಿಗ್ಗೆ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ, ಐವರು ಸಹೋದರರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ದಾವಣಗೆರೆ ರಸ್ತೆಯಲ್ಲಿರುವ ಖಬರಸ್ಥಾನದಲ್ಲಿ ಮೃತರ ಅಂತ್ಯಕ್ರಿಯೆ ಬುಧವಾರ ನಡೆಸಲಾಯಿತೆಂದು ಕುಟುಂಬದ ಮೂಲಗಳು ತಿಳಿಸಿವೆ.










