Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕೂಸಿನ ಮನೆ ತರಬೇತಿಗೆ ತಾ.ಪಂ. ಇಓ ವೈ.ರವಿಕುಮಾರ್ ಚಾಲನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 18 : ಏಳು ದಿನಗಳ ಕಾಲ ನಡೆಯುವ ಕೂಸಿನ ಮನೆ ತರಬೇತಿಗೆ ಆರೈಕೆದಾರರು ಗೈರು ಹಾಜರಾಗದೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೈ.ರವಿಕುಮಾರ್ ತಿಳಿಸಿದರು.

 

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆಯಿಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕೂಸಿನ ಮನೆ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು.

 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಇದ್ದಾಗಿದ್ದು, ಮೊದಲನೆ ಹಂತದ ತರಬೇತಿ ಮುಗಿದಿದೆ. ಎರಡನೆ ಹಂತದ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳು ನೀಡುವ ಮಾಹಿತಿಯನ್ನು ಶ್ರದ್ದೆಯಿಂದ ಗ್ರಹಿಸಬೇಕು. ನರೇಗಾದಡಿ ಕೂಲಿ ಕೆಲಸದಲ್ಲಿ ತೊಡಗಿರುವವರ ಮಕ್ಕಳನ್ನು ಕೂಸಿನ ಮನೆಯಲ್ಲಿ ಜೋಪಾನವಾಗಿ ನೋಡಿಕೊಳ್ಳಬೇಕು. ಸೊನ್ನೆಯಿಂದ ಮೂರು ವರ್ಷದ ಕೂಸುಗಳ ಲಾಲನೆ ಪಾಲನೆಯಲ್ಲಿ ಯಾವುದೇ ಲೋಪವಾಗಬಾರದು. ಪೌಷ್ಟಿಕಾಂಶ ಆಹಾರ ಹಾಗೂ ಸ್ವಚ್ಚತೆಯನ್ನು ಕಾಪಾಡಿಕೊಂಡು ಸಂರಕ್ಷಣೆ ಮಾಡುವ ಜವಾಬ್ದಾರಿ ನಿಮ್ಮಗಳ ಮೇಲಿದೆ ಎಂದು ಆರೈಕೆದಾರರಿಗೆ ಕರೆ ನೀಡಿದರು.

 

ಆರೈಕೆದಾರರಿಗೆ ತರಬೇತಿ ನೀಡಲು ಸಿ.ಡಿ.ಪಿ.ಓ. ಇಲಾಖೆಯ ಟ್ರೈನರ್ ಹೆಚ್.ಎಸ್.ಮಂಜುಳ, ವಾಸವಿ, ಎ.ಎನ್.ಎಸ್.ಎಸ್.ಐ.ಆರ್.ಡಿ. ಭವ್ಯ, ತಾಲ್ಲೂಕು ಪಂಚಾಯಿತಿ ವಿಷಯ ನಿರ್ವಾಹಕ ನಿಜಪ್ಪ ತರಬೇತಿಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...