ಸುದ್ದಿಒನ್, ಚಿತ್ರದುರ್ಗ, ಜುಲೈ. 30 : ಚಿತ್ರದುರ್ಗ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾಲೂಕಿನ ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕ ಪಡೆದ ಚಿತ್ರದುರ್ಗ ತಾಲ್ಲೂಕಿನ ಕುರುಬ ಸಮಾಜದ ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ. ಕುರುಬ ಸಮಾಜದ ಅರ್ಹ ವಿದ್ಯಾರ್ಥಿಗಳು ಅಥವಾ ಅವರ ಪೋಷಕರು ತಮ್ಮ ವಿವರಗಳನ್ನು ಆಗಸ್ಟ್ 09ರ ಸಂಜೆ 5 ಗಂಟೆಯೊಳಗೆ ಫೋನ್ ನಂಬರ್ ಸಹಿತ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಕೆ. ಮಂಜುನಾಥ್ ಅವರ ಮೊಬೈಲ್ ಸಂಖ್ಯೆ, 9844412448 ಅಥವಾ ಪ್ರಧಾನ ಕಾರ್ಯದರ್ಶಿ ಹನುಮಂತಗೌಡ ಪೂಜಾರ್ ಅವರ ಮೊಬೈಲ್ ಸಂಖ್ಯೆ 9448339025 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











