ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಅ.16: ಚಿತ್ರದುರ್ಗ ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟದ ಸಹಕಾರ ಸಂಘ (ಟಿಎಪಿಸಿಎಂಎಸ್) ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಲಿ ನಿರ್ದೇಶಕರ ಸ್ಥಾನಗಳಿಗೆ ‘ಬಿ’ ತರಗತಿ ರೈತ ಸದಸ್ಯರಿಂದ 8 ಮಂದಿ ನಿರ್ದೇಶಕರು ಹಾಗೂ ‘ಎ’ ತರಗತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ 5 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
‘ಬಿ’ ತರಗತಿ ರೈತ ಸದಸ್ಯರಿಂದ ಕೋಗುಂಡೆ ಹೆಚ್.ಎಂ.ಮಂಜುನಾಥಪ್ಪ, ಯಳಗೋಡು ಜಿ.ಆರ್.ಧನಂಜಯ, ಭರಮಸಾಗರ ಎನ್.ಕಲ್ಲೇಶ್, ಅನ್ನೇಹಾಳ್ ಹೆಚ್.ನಿರಂಜನಮೂರ್ತಿ, ಸಿರಿಗೆರೆ ಕೆ.ಜಿ.ಕವಿತ ಬಸವಕುಮಾರ್, ಚಿಕ್ಕಬೆನ್ನೂರು ಬಿ.ಎಸ್.ಶಾಂತಕುಮಾರಿ, ಸಿರಿಗೆರೆ ಎಸ್.ಹೆಚ್.ತಿಪ್ಪೇಸ್ವಾಮಿ, ವಡ್ಡರಸಿದ್ದವ್ವನಹಳ್ಳಿ ಟಿ.ಸಣ್ಣ ತಿಮ್ಮಪ್ಪ ಆಯ್ಕೆಯಾಗಿದ್ದಾರೆ.
‘ಎ’ ತರಗತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಕೋಡಿರಂಗವ್ವನಹಳ್ಳಿ ಹೆಚ್.ಎನ್.ಹನುಮಂತಪ್ಪ, ಸಿಂಗಾಪುರ ಕೆ.ಆರ್.ರವಿ, ಸಿರಿಗೆರೆ ಎಂ.ಎಸ್.ಪ್ರಸನ್ನ, ಕೊಡಗವಳ್ಳಿಯ ಬಿ.ಎನ್.ದೇವರಾಜ್, ಹಿರೇಕಬ್ಬಿಗೆರೆ ಜಿ.ಎಸ್.ನಾಗರಾಜ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಮಹಮ್ಮದ್ ಯೂನಸ್ ಫರ್ವಿಜ್ ಘೋಷಿಸಿದ್ದಾರೆ ಎಂದು ಚಿತ್ರದುರ್ಗ ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟದ ಸಹಕಾರ ಸಂಘದ ಕಾರ್ಯದರ್ಶಿ ಜಿ.ಎನ್.ಉಮಾಶಂಕರ್ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್