ಸುದ್ದಿಒನ್, ಚಿತ್ರದುರ್ಗ, ಜೂನ್. 02 : ನಗರದ ದೊಡ್ಡಪೇಟೆಯ ಕರುವಿನಕಟ್ಟೆ ಸರ್ಕಲ್ ವಾಸಿ ದಿವಂಗತ ಗಂಗೋಜಿರಾವ್ ರವರ ಧರ್ಮಪತ್ನಿ ಹಾಗೂ ನಾಟ್ಯರಂಜನಿ ನೃತ್ಯ ಕಲಾ ಕೇಂದ್ರದ ಜಿ.ಕಿರಣ್ ಗುಜ್ಜಾರ್ ಇವರ ತಾಯಿ ಶ್ರೀಮತಿ ತಾರಾಬಾಯಿ ಗುಜ್ಜಾರ್ (94) ಸೋಮವಾರ ಮಧ್ಯಾಹ್ನ 1-30 ಕ್ಕೆ ನಿಧನರಾದರು.
ಮೃತರು ಮೂವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಜೋಗಿಮಟ್ಟಿ ರಸ್ತೆಯಲ್ಲಿರುವ ಮುಕ್ತಿಧಾಮ ಚಿತಾಗಾರದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









