Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಮುರುಘಾ ಮಠದ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದ ಹೈಕೋರ್ಟ್ …!

Facebook
Twitter
Telegram
WhatsApp

ಬೆಂಗಳೂರು: ನವರಾತ್ರಿ ಹಬ್ಬಕ್ಕೆ ಮುರುಘಾ ಮಠಕ್ಕೆ ಸಿಹಿ ಸುದ್ದಿಯನ್ನು ಹೈಕೋರ್ಟ್ ನೀಡಿದೆ. ಅಕ್ಟೋಬರ್ ತಿಂಗಳ ವೇತನದ ಚೆಕ್ ಗಳಿಗೆ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಸಹಿ ಹಾಕುವುದಕ್ಕೆ ಹೈಕೋರ್ಟ್ ಅಸ್ತು ಎಂದಿದೆ. ಅಕ್ಟೋಬರ್ ತಿಂಗಳ ಚೆಕ್ ಗಳಿಗೆ ಸಹಿ ಹಾಕುವುದಕ್ಕೆ ಷರತ್ತು ಬದ್ದ ಅನುಮತಿ ನೀಡಿದೆ.

ಷರತ್ತು ಬದ್ಧ ಅನುಮತಿಯಲ್ಲಿ ಹಲವು ಅಂಶಗಳನ್ನು ಸೇರಿಸಲಾಗಿದೆ. ಮುರುಘಾಶ್ರೀಗಳಿಂದ ವೇತನಕ್ಕೆ ಸಂಬಂಧಿಸಿದ ಚೆಕ್ ಗಳಿಗೆ ಮಾತ್ರ ಸಹಿ ಹಾಕಿಸಿಕೊಳ್ಳಬೇಕು. ಸಹಿ ಪಡೆಯಲು ಸಂಬಂಧಪಟ್ಟವರಿಗೆ ಚಿತ್ರದುರ್ಗದ ಸೆಂಟ್ರಲ್ ಜೈಲು ಅಧಿಕಾರಿಗಳಿಂದ ಅನುಮತಿ ಪಡೆಯಬೇಕಾಗಿದೆ. ಸಹಿ ಹಾಕುವ ವೇಳೆ ಜೈಲು ಅಧಿಕಾರಿ ಹಾಗೂ ತನಿಖಾಧಿಕಾರಿ ಜೊತೆಯಲ್ಲಿಯೇ ಇರಬೇಕು. ಈ ಆದೇಶ ಅಕ್ಟೋಬರ್ ತಿಂಗಳಿಗೆ ಮಾತ್ರ ಅನ್ವಯಿಸಲಿದೆ ಎಂದು ಆದೇಶದಲ್ಲಿ ತಿಳಿಸಿದೆ.

ವೇತನವಿಲ್ಲದೆ ವಿದ್ಯಾಪೀಠದ ಸಿಬ್ಬಂದಿಗಳು ಉಪವಾಸ ಇರಬಾರದು ಎಂದು ಹೈಕೋರ್ಟ್ ಈ ಆದೇಶ ನೀಡಿದೆ. ಅರ್ಜಿ ಸಲ್ಲಿಕೆಯಾದಾಗಲೂ ಕೋರ್ಟ್ ಇದನ್ನೇ ಹೇಳಿತ್ತು. ಯಾರನ್ನು ಉಪವಾಸ ಇರಿಸುವ ಉದ್ದೇಶ ಇಲ್ಲ ಎಂದೇ ಪ್ರಸ್ತಾಪಿಸಿತ್ತು. ಇದೀಗ ವಿಚಾರಣೆ ನಡೆಸಿದ ಹೈಕೋರ್ಟ್ ಮಾನವೀಯ ನೆಲೆಗಟ್ಟಿನಲ್ಲಿ ಆದೇಶ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!