Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ವಿಜೃಂಭಣೆಯಿಂದ ಸಾಗಿದ ಬರಗೇರಮ್ಮನವರ ಮೆರವಣಿಗೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 11 : ಹೊಳಲ್ಕೆರೆ ರಸ್ತೆಯಲ್ಲಿರುವ ಬರಗೇರಮ್ಮನ ಮೆರವಣಿಗೆ ನಗರದಲ್ಲಿಂದು ವಿಜೃಂಭಣೆಯಿಂದ ನಡೆಯಿತು.

ಹೊಳಲ್ಕೆರೆ ರಸ್ತೆಯಲ್ಲಿರುವ ಕನಕ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಸಂಗೊಳ್ಳಿರಾಯಣ್ಣ ವೃತ್ತ, ಗಾಂಧಿವೃತ್ತ, ಲಕ್ಷ್ಮಿಬಜಾರ್ ಮೂಲಕ ಆನೆಬಾಗಿಲು  ಉಚ್ಚಂಗಿಯಲ್ಲಮ್ಮ ದೇವಸ್ಥಾನದ ಮುಂಭಾಗದಿಂದ ದೊಡ್ಡಪೇಟೆಯ ರಾಜಬೀದಿಯಲ್ಲಿ ಸಾಗಿತು.

ಬಣ್ಣ ಬಣ್ಣದ ಹೂವು ಹಾಗೂ ಹಾರಗಳಿಂದ ಮನಮೋಹಕವಾಗಿ ಬರಗೇರಮ್ಮನನ್ನು ಸಿಂಗರಿಸಲಾಗಿತ್ತು. ಸುಡುಬಿಸಿಲನ್ನು ಲೆಕ್ಕಿಸದೆ ಯುವಕರು ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದರು.

ಗೊಂಬೆ ಕುಣಿತ, ಸೋಮನ ಕುಣಿತ, ಡೊಳ್ಳು, ತಮಟೆ, ಉರುಮೆ ಸದ್ದಿಗೆ ಭಕ್ತರು ಹೆಜ್ಜೆ ಹಾಕುತ್ತಿದ್ದರು. ಮೆರವಣಿಗೆಯುದ್ದಕ್ಕೂ ಅಲ್ಲಲ್ಲಿ ಭಕ್ತರು ಪೂಜೆ ಸಲ್ಲಿಸಿ
ಬರಗೇರಮ್ಮನಿಗೆ ಭಕ್ತಿ ಸಮರ್ಪಿಸಿದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...