Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಾಳೆ ರಾಜ್ಯ ಮಟ್ಟದ ಶೋಷಿತರ ಜಾಗೃತಿ ಸಮಾವೇಶ | ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ : ಇಲ್ಲಿದೆ ಮಾಹಿತಿ…!

---Advertisement---

 

ಚಿತ್ರದುರ್ಗ ಜ. 26  : ಇದೇ ಜ. 28 ರಂದು ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಶ್ರೀ ಬಸವ ಮೂರ್ತಿ ಮಾದಾರ ಚನ್ನಯ್ಯ ಪೀಠದ ಬಳಿಯ ಖಾಲಿ ಜಾಗದಲ್ಲಿ ರಾಜ್ಯ ಮಟ್ಟದ ಶೋಷಿತರ ಜಾಗೃತಿ ಸಮಾವೇಶ ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸೇರಿದಂತೆ ವಿವಿಧ ಸಚಿವರುಗಳು ಪಾಲ್ಗೊಳ್ಳುವರು.  ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಅಂದು ಬೆ. 06 ರಿಂದ ಸಂಜೆ 06 ಗಂಟೆಯವರೆಗೆ ಚಿತ್ರದುರ್ಗ ನಗರಕ್ಕೆ ವಿವಿಧೆಡೆಯಿಂದ ಆಗಮಿಸುವ ಭಾರಿ ಹಾಗೂ ಲಘು ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆಗೊಳಿಸಿ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಆದೇಶ ಹೊರಡಿಸಿದ್ದಾರೆ.

ಸಮಾವೇಶದಲ್ಲಿ ಪಾಲ್ಗೊಳ್ಳಲು ಜ. 28 ರಂದು ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಜನರು ವಾಹನಗಳಲ್ಲಿ ಆಗಮಿಸುವ ನಿರೀಕ್ಷೆಯಿದ್ದು, ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿರುವುದರಿಂದ, ಸಂಚಾರ ದಟ್ಟಣೆ ತಡೆಯುವ ನಿಟ್ಟಿನಲ್ಲಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಂಬಂಧ ಕೆಲವು ಸಂಚಾರ ಮಾರ್ಗದ ಬದಲಾವಣೆ  ಮಾಡಲಾಗಿದೆ.

ದಾವಣಗೆರೆ ಮಾರ್ಗದಿಂದ ಬರುವ ವಾಹನಗಳು ಹೊಸ ಎನ್.ಹೆಚ್.-48 (ಬೈಪಾಸ್) ರಸ್ತೆಯ ಮೂಲಕ ರಾಷ್ಟ್ರೀಯ ಹೆದ್ದಾರಿ -13 ರ ಮೂಲಕ ಮುಂದುವರೆದು ಮದಕರಿಪುರ ಗ್ರಾಮದ ಬಳಿಯ ಸರ್ವಿಸ್ ರಸ್ತೆಯ ಮೂಲಕ ಇಳಿದು ಚಳ್ಳಕೆರೆ ರಸ್ತೆಯ ಮೂಲಕ ನಗರಕ್ಕೆ ಪ್ರವೇಶಿಸಬೇಕು.

ಹೊಸಪೇಟೆ ಮಾರ್ಗದಿಂದ (ಎನ್.ಹೆಚ್.-50) ಮೂಲಕ ಬರುವ ಪ್ರಯಾಣಿಕರ ವಾಹನಗಳು ಎನ್.ಹೆಚ್.-48 ರ ಬೈಪಾಸ್ ರಸ್ತೆ ಮುಖಾಂತರ ಮದಕರಿಪುರ ಗ್ರಾಮದ ಬಳಿಯ ರಸ್ತೆಯ ಮೂಲಕ ಇಳಿದು ಚಳ್ಳಕೆರೆ ರಸ್ತೆಯ ಮೂಲಕ ನಗರಕ್ಕೆ ಪ್ರವೇಶಿಸಬೇಕು.

ಶಿವಮೊಗ್ಗ ಹಾಗೂ ಭೀಮಸಮುದ್ರ ಮಾರ್ಗದಿಂದ ಬರುವ ವಾಹನಗಳು ಕಣಿವೆ ಕ್ರಾಸ್ ಮುಖಾಂತರ ನಗರಕ್ಕೆ ಪ್ರವೇಶಿಸಬೇಕು.

ಶಿವಮೊಗ್ಗ ಕಡೆಯಿಂದ ಚನ್ನಗಿರಿ ಮಾರ್ಗವಾಗಿ ಚಿತ್ರದುರ್ಗಕ್ಕೆ ಸಂಚರಿಸುವ ಸರಕು ಸಾಗಣೆಯ ಭಾರಿ ವಾಹನಗಳು ಚನ್ನಗಿರಿ ಪಟ್ಟಣದಿಂದ ಸಂತೆಬೆನ್ನೂರು ಕ್ರಾಸ್ ಮುಖಾಂತರ ಸಂಚರಿಸಿ, ಸಂತೆಬೆನ್ನೂರು ಮಾರ್ಗವಾಗಿ ಎನ್.ಹೆಚ್.-48 ರಸ್ತೆ ಮುಖಾತರ ಸಂಚರಿಸಬೇಕು.

ಮುರುಘರಾಜೇಂದ್ರ ಬೃಹನ್ಮಠದ ಮುಂಭಾಗದಿಂದ ಸೀಬಾರ ಅಂಡರ್‍ಪಾಸ್ ವರೆಗಿನ ಎನ್.ಹೆಚ್.-48 ರಸ್ತೆಯಲ್ಲಿ ಎಲ್ಲಾ ಬಗೆಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment