Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಾಳೆ ರಾಜ್ಯಮಟ್ಟದ ಮಾದಿಗ  ವಕೀಲರ  ಬೃಹತ್ ಸಮಾವಶ

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 13 : ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ವತಿಯಿಂದ ಡಿಸೆಂಬರ್ 14ರಂದು ಬೆಳಿಗ್ಗೆ 10.30ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ಸುಪ್ರೀಂಕೋರ್ಟ್ ಆದೇಶದನ್ವಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗಾಗಿ “ಪ್ರಥಮ ರಾಜ್ಯಮಟ್ಟದ ಮಾದಿಗ  ವಕೀಲರ  ಬೃಹತ್ ಸಮಾವೇಶ” ಹಮ್ಮಿಕೊಳ್ಳಲಾಗಿದೆ.

 

ಮಾದಾರ ಚನ್ನಯ್ಯ ಮಠದ ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿ ದಿವ್ಯ ಸಾನಿಧ್ಯವಹಿಸುವರು. ಸಂಸದ ಗೋವಿಂದ ಎಂ ಕಾರಜೋಳ ದೀಪ ಬೆಳಗಿಸುವರು. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ್ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಎ.ನಾರಾಯಣಸ್ವಾಮಿ, ಹೆಚ್.ಆಂಜನೇಯ ಭಾಗವಹಿಸುವರು. ಹಿರಿಯ ವಕೀಲರು ಹಾಗೂ ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ  ವೇದಿಕೆ ಅಧ್ಯಕ್ಷ ಎಸ್.ಅರುಣ್ ಕುಮಾರ್ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಮಾಜಿ ಸಚಿವ ಆಲ್ಕೋಡು ಹನುಮಂತಪ್ಪ, ಬಹುಜನ ಚಳಿವಳಿಗಾರ ಮಾರಸಂದ್ರ ಮುನಿಯಪ್ಪ, ಹಿರಿಯ ವಕೀಲ ಎಸ್.ಮಾರೆಪ್ಪ, ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ, ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ವಿಜಯ್ ಕುಮಾರ್ ಹಾಗೂ ಹಿರಿಯ ವಕೀಲರು ಭಾಗವಹಿಸುವರು.

ಅಂದು ಮಧ್ಯಾಹ್ನ 2.30ಕ್ಕೆ ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣಕ್ಕಾಗಿ ಕರ್ನಾಟಕ ಸರ್ಕಾರ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರ ಏಕ ಸದಸ್ಯ ಆಯೋಗದ ಮುಂದೆ ಇರುವ ನಮ್ಮ ಸವಾಲುಗಳು ಕುರಿತು ಗೋಷ್ಠಿ ನಡೆಯಲಿದೆ.  ಮಂಡ್ಯ ಜಿಲ್ಲೆಯ ನಿವೃತ್ತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ  ಹೆಚ್.ಸಿ.ಶ್ಯಾಮ್ ಪ್ರಸಾದ್ ಅಧ್ಯಕ್ಷತೆ ವಹಿಸುವರು. ಪ್ರತಿ ಜಿಲ್ಲೆಯಿಂದ ತಲಾ ಒಬ್ಬ ಹಿರಿಯ ವಕೀಲರಿಂದ ಅಭಿಪ್ರಾಯ ಮಂಡನೆ ನಡೆಯಲಿದೆ.

ಬೃಹತ್ ಸಮಾವೇಶದ ಅಂಗವಾಗಿ ಅಂದು ಬೆಳಿಗ್ಗೆ 10ಕ್ಕೆ ತಮಟೆ ಕಲಾತಂಡದೊಂದಿಗೆ ಒಳಮೀಸಲಾತಿ ಘೋಷಣೆ ಮೊಳಗಿಸುತ್ತಾ ಸಮಾಜದ ವಕೀಲರು ಕೋಟು ಧರಿಸಿ, ನಗರದ ತರಾಸು ರಂಗಮಂದಿರದಿಂದ ಮೆರವಣಿಗೆ ಪ್ರಾರಂಭಿಸಿ, ವಾಲ್ಮೀಕಿ ವೃತ್ತ ಬಳಸಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿ, ನಂತರ ಬೆಳಿಗ್ಗೆ 10.30ಕ್ಕೆ ತರಾಸು ರಂಗಮಂದಿರಕ್ಕೆ ಆಗಮಿಸುವುದು ಎಂದು ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...