Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ವಾಸವಿ ಮಹಿಳಾ ಸಂಘದ ಕ್ಯಾಲೆಂಡರ್ ಲೋಕಾರ್ಪಣೆ

---Advertisement---

ಸುದ್ದಿಒನ್, ಚಿತ್ರದುರ್ಗ : ಸನಾತನ ಹಿಂದೂ ಧರ್ಮದ ಸಂಪ್ರದಾಯದಲ್ಲಿ ಯುಗಾದಿ ಹಬ್ಬ ವರ್ಷದ ಮೊದಲ ಹಬ್ಬ ದಿನವೇ ಈ ಕ್ಯಾಲೆಂಡರ್ ಬಿಡುಗಡೆಯಾಗಿರುವುದು ಆಯಾಯಾ ದಿನಗಳಲ್ಲಿ ಬರುವ ವಿಶೇಷ ದಿನಗಳ ಆಚರಣೆಗೆ ಇದು ಸಹಾಯಕವಾಗಿದೆ ಎಂದು ಶ್ರೀಮತಿ ನಾಗರತ್ನ ಬದರಿನಾಥ್‍ ಹೇಳಿದರು.

ನಗರದ ಶ್ರೀ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ದಿನಾಂಕ ಬುಧವಾರ ಕ್ಯಾಲೆಂಡರ್ ಲೋಕಾರ್ಪಣೆ ಮಾಡಿ ಮಾತನಾಡಿ ಅವರು ಮಾತನಾಡಿದರು.

ಪ್ರತಿ ಮಾಸದಲ್ಲಿ ಆಚರಿಸುವ ಹಬ್ಬ ಹರಿದಿನಗಳು ಮತ್ತು ವಿಶೇಷ ದಿನಗಳ ಕಾರ್ಯಕ್ರಮಗಳ ಕೈಗನ್ನಡಿಯಂತೆ ವಾಸವಿ ಮಹಿಳಾ ಸಂಘದವರು ಪ್ರಕಟಿಸಿರುವ ಈ ಕ್ಯಾಲೆಂಡರ್ ವೈಶಿಷ್ಟ್ಯಪೂರ್ಣವಾಗಿದೆ. ಆರ್ಯವೈಶ್ಯ ಸಮುದಾಯದ ಹಲವಾರು ಸಂಘ ಸಂಸ್ಥೆಗಳು ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಕ್ರಮಬದ್ಧವಾಗಿ ಆಚರಿಸುತ್ತಾ ಬಂದಿರುವುದು ಚಿತ್ರದುರ್ಗದಲ್ಲಿ ವಿಶೇಷವೆನಿಸಿದೆ ಎಂದರು.

ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಟಿ. ಬದರಿನಾಥ್ ಅವರು
ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಲು ಪ್ರಯತ್ನಿಸಬೇಕೆಂದು ಜಾಗೃತಿ ಮೂಡಿಸಿದರು.
ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ನಂಬಿಕೆಗಳು ಕುಂಠಿತವಾಗುತ್ತಿರುವುದು ವಿಶಾದನೀಯ ಸಂಗತಿ. ನಮ್ಮ ಶಾರೀರಿಕ ಹಾಗೂ ಬೌಧಿಕ ವಿಕಾಸಕ್ಕೆ ದೇವತಾರ್ಚನೆ ಮೊದಲಾದ ಧಾರ್ಮಿಕ ನಂಬಿಕೆಗಳು, ಶಕ್ತಿ ನೀಡುತ್ತವೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಾಸವಿ ಮಹಿಳಾ ಸಂಘದ ಅಧ್ಯಕ್ಷಿಣಿ ಸುಮಾ ಅನಂತ್‍ರವರು ಮಾತನಾಡಿ, ಈ ಕ್ಯಾಲೆಂಡರ್ ಪ್ರಾಯೋಜಕತ್ವವನ್ನು ಪ್ರತಿ ವರ್ಷವೂ ವಹಿಸಿಕೊಂಡು ಬರುತ್ತಿರುವ ಜ್ಞಾನದೀಪ ವಿದ್ಯಾ ಮಂದಿರದ ಮುಖ್ಯಸ್ಥರಾದ ಶ್ರೀಮತಿ ನಾಗರತ್ನ ಬದರಿನಾಥ್ ಅವರನ್ನು ಸನ್ಮಾನಿಸಿ ಧಾರ್ಮಿಕ ಸಂಪ್ರದಾಯ ಆರ್ಯವೈಶ್ಯರಲ್ಲಿ ಸದಾ ಕಾಲ ಜಾಗೃತವಾಗಿ ಇರುತ್ತದೆ ಎಂದು ಹೇಳಿದರು.

ವೇದಿಕೆಯಲ್ಲಿ ಆರ್ಯವೈಶ್ಯ ಸಂಘದ ಉಪಾಧ್ಯಕ್ಷರಾದ ಎಂ.ವಿ. ಮಂಜುನಾಥ್, ಎಂ.ಆರ್. ಅರುಣ್‍ಕುಮಾರ್, ಟಿ.ಎಸ್. ಸುಹಾಸ್ ಹಾಗೂ ವಾಸವಿ ಮಹಿಳಾ ಸಂಘದ ಕಾರ್ಯದರ್ಶಿ, ಲಕ್ಷ್ಮಿ ರಮಾಕಾಂತ್ ಉಪಸ್ಥಿತರಿದ್ದರು.  ಈ ಕಾರ್ಯಕ್ರಮದಲ್ಲಿ ಆರ್ಯವೈಶ್ಯ ಸಮುದಾಯದ ಎಲ್ಲಾ ಸಹ ಸಂಸ್ಥೆಯವರು ಭಾಗವಹಿಸಿದ್ದರು. ಎಂದಿನಂತೆ ಕನ್ಯಕಾಪರಮೇಶ್ವರಿ ದೇವಿ ಸಹಿತ ವಿವಿಧ ದೇವತೆಯರಿಗೆ ಅಷ್ಠಾವಧಾನ ಸಹಿತವಾಗಿ ಪೂಜೆಗಳು ಮಹಾ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ವಿದಿವತ್ತಾಗಿ ನಡೆಯಿತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...