ಸುದ್ದಿಒನ್,
ಚಿತ್ರದುರ್ಗ, ಮಾ. 24 : ನಗರದ ಕೆಳಗೋಟೆ ನಿವಾಸಿ, ಹಿಂದಿನ ಕೆ.ಇ.ಬಿ. ನಿವೃತ್ತ ನೌಕರ ಕಿಲ್ಲೇದಾರ ವಂಶಸ್ಥ ವೀರಭದ್ರಪ್ಪ ಅವರು ಇಂದು ಮಧ್ಯಾಹ್ನ 12-45 ರ ಸುಮಾರಿಗೆ ತಮ್ಮ ಸ್ವಗೃಹದಲ್ಲಿ ವಯೋಸಹಜ ಕಾರಣಕ್ಕಾಗಿ ನಿಧನ ಹೊಂದಿದರು.
ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಪತ್ನಿ, ಐವರು ಪುತ್ರಿಯರು, ಎಂಟು ಜನ ಮೊಮ್ಮಕ್ಕಳು, ಅಳಿಯಂದಿರು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಅಂತ್ಯಕ್ರಿಯೆ : ಮೃತರ ಅಂತ್ಯಕ್ರಿಯೆ ಮಾ. 25ರ ಮಂಗಳವಾರ ಬೆಳಗ್ಗೆ 09-30 ಗಂಟೆ ಸುಮಾರಿಗೆ ಜೋಗಿಮಟ್ಟಿ ರಸ್ತೆಯಲ್ಲಿನ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿ ವಿಧಾನಗಳಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












