Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಅಪ್ರಾಪ್ತ ಬಾಲಕನಿಗೆ ಸ್ಕೂಟಿ ನೀಡಿದ್ದ ವಾಹನ ಮಾಲೀಕನಿಗೆ ₹30,000 ದಂಡ, ಶಿಕ್ಷೆ!

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 29 : ಅಪ್ರಾಪ್ತ ಬಾಲಕನಿಗೆ ಚಾಲನಾ ಪರವಾನಗಿ ಹಾಗೂ ವಿಮೆ ಇಲ್ಲದ ಸ್ಕೂಟಿ ಚಾಲನೆಗೆ ನೀಡಿ, ಅಪಘಾತಕ್ಕೆ ಕಾರಣನಾಗಿದ್ದ ವಾಹನ ಮಾಲೀಕನಿಗೆ ನ್ಯಾಯಾಲಯವು ದಂಡ ಹಾಗೂ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಚಿತ್ರದುರ್ಗದ ವಾಸಿ ವಿಜಯಭಾಸ್ಕರ್ ಎಸ್.ಎನ್. (ಬಿನ್ ನಟರಾಜ್) ಶಿಕ್ಷೆಗೆ ಒಳಗಾದ ವಾಹನ ಮಾಲೀಕರಾಗಿದ್ದಾರೆ. ಪ್ರಧಾನ ಸಿ. ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಮಮತ ಡಿ. ರವರು ಪ್ರಕರಣದ ವಿಚಾರಣೆ ನಡೆಸಿ ದಿನಾಂಕ 28.07.2026 ರಂದು ಈ ತೀರ್ಪು ಪ್ರಕಟಿಸಿದ್ದಾರೆ. ದಿನಾಂಕ 24.11.2024 ರಂದು ಬೆಳಿಗ್ಗೆ 7:30 ರ ಸುಮಾರಿಗೆ ಚಿತ್ರದುರ್ಗದ ಅಪ್ರಾಪ್ತ ಬಾಲಕನೊಬ್ಬ ವಿಜಯಭಾಸ್ಕರ್ ಅವರಿಗೆ ಸೇರಿದ ಕೆಎ 16 ಇಎಕ್ಸ್ 3444 ನೋಂದಣಿ ಸಂಖ್ಯೆಯ ಸ್ಕೂಟಿಯಲ್ಲಿ ಸಮರ್ಧ ಮತ್ತು ಚಿನ್ಮಯಿ ಎಂಬಿಬ್ಬರನ್ನು ಹಿಂಬದಿ ಸವಾರರನ್ನಾಗಿ ಕೂರಿಸಿಕೊಂಡು ಚಲಾಯಿಸುತ್ತಿದ್ದನು.

 

ಹಳೇ ಬೆಂಗಳೂರು ರಸ್ತೆಯ ಚಳ್ಳಕೆರೆ ಗೇಟ್ ಸರ್ಕಲ್ ಬಳಿಯ ಉಪಾಧ್ಯ ಹೋಟೆಲ್ ಹತ್ತಿರ ಅತಿವೇಗ ಹಾಗೂ ಅಜಾಗರೂಕತೆಯಿಂದ ಸ್ಕೂಟರ್ ಚಲಾಯಿಸಿಕೊಂಡು ಬಂದ ಬಾಲಕ, ಅಲ್ಲಿ ಆಟೋಗಾಗಿ ಕಾಯುತ್ತಿದ್ದ ಗುರುಮೂರ್ತಿ ಎಂಬುವರಿಗೆ ಡಿಕ್ಕಿ ಹೊಡೆದಿದ್ದನು. ಪರಿಣಾಮವಾಗಿ ಗುರುಮೂರ್ತಿ ಅವರ ಮೈಕೈಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಸ್ಕೂಟಿಗೆ ವಿಮೆ ಇಲ್ಲದಿರುವುದು ಮತ್ತು ಚಾಲನಾ ಪರವಾನಗಿ ಇಲ್ಲದ ಅಪ್ರಾಪ್ತ ಬಾಲಕನಿಗೆ ವಾಹನ ಚಾಲನೆ ಮಾಡಲು ನೀಡಿದ್ದು ತನಿಖೆಯಲ್ಲಿ ದೃಢಪಟ್ಟಿತ್ತು. ಈ ಕುರಿತು ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯ ಹೆಚ್.ಸಿ. ಸ್ವಾಮಿ ಎಸ್.ಬಿ. ರವರು ಸಂಪೂರ್ಣ ತನಿಖೆ ನಡೆಸಿ, ವಾಹನ ಮಾಲೀಕ ವಿಜಯಭಾಸ್ಕರ್ ಎಸ್.ಎನ್. ಬಿನ್ ನಟರಾಜ್ ವಿರುದ್ಧ ಐಎಂವಿ ಆಕ್ಟ್ (IMV Act) ಕಲಂ 196, 180, 199(ಎ) ರಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

 

ಪ್ರಕರಣದ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಮಮತ ಡಿ. ರವರು ಆರೋಪಿಗೆ ಒಂದು ದಿನ ನ್ಯಾಯಾಲಯದ ಕಲಾಪ ಮುಗಿಯುವವರೆಗೆ ನ್ಯಾಯಾಲಯದಲ್ಲಿ ಕುಳಿತುಕೊಳ್ಳುವ ಶಿಕ್ಷೆ ಹಾಗೂ ಮೂವತ್ತು ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಪಾವತಿಸಲು ತಪ್ಪಿದ್ದಲ್ಲಿ 60 ದಿನಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಚಿತ್ರದುರ್ಗದ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ಸಿ. ಮಂಜುನಾಥ ಅವರು ವಾದ ಮಂಡಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now