ಚಿತ್ರದುರ್ಗ | ಹಿರಿಯ ಪತ್ರಕರ್ತ ಜಿ.ಎಸ್‌.ಉಜ್ಜಿನಪ್ಪನವರಿಗೆ ಪತ್ನಿ ವಿಯೋಗ

0 Min Read

ಸುದ್ದಿಒನ್, ಚಿತ್ರದುರ್ಗ, ಜುಲೈ. 18 : ಜಿಲ್ಲೆಯ ಹಿರಿಯ ಪತ್ರಕರ್ತ ಜಿ.ಎಸ್‌.ಉಜ್ಜಿನಪ್ಪ ಅವರ ಪತ್ನಿ ಎಸ್‌.ಭೈರಮ್ಮ (66) ಗುರುವಾರ ಅನಾರೋಗ್ಯದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಇವರು ನಗರದ ಸರಸ್ವತಿಪುರಂ ಬಡಾವಣೆಯಲ್ಲಿ ವಾಸಿಸುತ್ತಿದ್ದರು.

ಅವರಿಗೆ ಪತಿ ಜಿ.ಎಸ್‌.ಉಜ್ಜಿನಪ್ಪ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಶುಕ್ರವಾರ) ಹಿರಿಯೂರು ತಾಲ್ಲೂಕಿನ ಗೌನಹಳ್ಳಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ : ಭೈರಮ್ಮ ಅವರ ನಿಧನಕ್ಕೆ ವಿವಿಧ ಮಠಾಧೀಶರು, ರಾಜಕಾರಣಿಗಳು,  ಜಿಲ್ಲೆಯ ಪತ್ರಕರ್ತರು ಸೇರಿದಂತೆ ಅನೇಕರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *