Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯಲ್ಲಿ ಈವರೆಗೂ ಮೊಳಕಾಲ್ಮೂರಿನಲ್ಲೇ ಹೆಚ್ಚು ಮತದಾನ : ಉಳಿದ ಕ್ಷೇತ್ರಗಳ ವಿವರ ಇಂತಿದೆ…!

Facebook
Twitter
Telegram
WhatsApp

 

 

ಚಿತ್ರದುರ್ಗ : ವಿಧಾನಸಭಾ ಚುನಾವಣೆ ಬೆಳಿಗ್ಗೆ 11 ಗಂಟೆಯವರೆಗಿನ ಮತದಾನ ವಿವರ

ಚಿತ್ರದುರ್ಗ, (ಮೇ.10) : ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಭರದಿಂದ ಸಾಗುತ್ತಿದೆ. ಬೆಳಿಗ್ಗೆಯಿಂದಲೇ ಜನರು ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ.

ಬೆಳಗ್ಗೆ ಹನ್ನೊಂದು ಗಂಟೆಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ದಾಖಲಾದ ಅಂದಾಜು ಶೇಕಡಾವಾರು ಮತದಾನ ಇಂತಿದೆ:

97 – ಮೊಳಕಾಲ್ಮೂರು – ಶೇ.24.64

98 – ಚಳ್ಳಕೆರೆ -ಶೇ.16.35

99 – ಚಿತ್ರದುರ್ಗ- ಶೇ.20.47

100 – ಹಿರಿಯೂರು-ಶೇ. 13.40

101 – ಹೊಸದುರ್ಗ-ಶೇ.16.91

102 – ಹೊಳಲ್ಕೆರೆ -ಶೇ.18.93

ಜಿಲ್ಲೆಯಲ್ಲಿ ಸರಾಸರಿ ಶೇ.18.56 ರಷ್ಟು ಮತದಾನ ಆಗಿದೆ.

ಜಿಲ್ಲಾಧಿಕಾರಿ ದಿವ್ಯಪ್ರಭು .ಜಿ.ಆರ್.ಜೆ, ಜಿ.ಪಂ.ಸಿಇಓ ಎಂ.ಎಸ್.ದಿವಾಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ ಅವರು ನಗರದ ಸೆಂಟ್ ಜೋಸೆಫ್ ಕಾನ್ವೆಂಟ್‌ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಚಿತ್ರದುರ್ಗ ವಿಧಾನಕ್ಷೇತ್ರ ಗೋನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಿರುವ ಸಖಿ ಮತಗಟ್ಟೆ(27)ನಲ್ಲಿ ಮಹಿಳೆಯರು ಸರಿತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತ ಚಲಾಯಿಸುವುದು ಕಂಡುಬಂದಿತು. ಒಟ್ಟು 1382 ಮತದಾರರು ಇದ್ದು, ಇದರಲ್ಲಿ ಬೆಳಿಗ್ಗೆ 11 ಗಂಟೆಯ ವೇಳೆಗೆ 143 ಪುರುಷ ಹಾಗೂ 146 ಮಹಿಳೆಯರು ಸೇರಿ ಒಟ್ಟು 289 ಮತದಾರರು ಮತಚಲಾಯಿಸಿದ್ದಾರೆ.

ಮತಗಟ್ಟೆಯಲ್ಲಿ ಬಿಸಿಲಿಂದ ರಕ್ಷಣೆಗಾಗಿ ಶಾಮಿಯಾನ, ವಿಕಚೇತನರು ಹಾಗೂ ಹಿರಿಯ ನಾಗರಿಕರಿಗೆ ಆಸನ, ವೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!