Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ನಿರ್ವಹಣೆ ಇಲ್ಲದೆ ಇದ್ದು ಇಲ್ಲದಂತಿರುವ ಶೌಚಾಲಯ : ಅಗತ್ಯ ಸೌಲಭ್ಯ ಕಲ್ಪಿಸಲು ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.19 : ನಗರದ ಮುಖ್ಯ ರಸ್ತೆ, ಪ್ರವಾಸಿ ಮಂದಿರದ ಪಕ್ಕದಲ್ಲಿ ನಿರ್ಮಿಸಿರುವ ವಾಣಿಜ್ಯ ಮಳಿಗೆಯಲ್ಲಿ ಶೌಚಾಲಯ ಸರಿಯಾದ ನಿರ್ವಹಣೆ ಇಲ್ಲದೇ ಇರುವುದರಿಂದ ಇದ್ದು, ಇಲ್ಲದಂತಾಗಿರುವುದು ಮಳಿಗೆಯಲ್ಲಿ ವ್ಯಾಪಾರ ನಡೆಸುತ್ತಿರುವ ಮಹಿಳೆಯರಿಗೆ ಅತೀವ ತೊಂದರೆಯಾಗಿದೆ ಎಂದು ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ಮತ್ತು ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧೀಕ್ಷಕ ಪ್ರಮೋದ್‍ರವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ವಾಣಿಜ್ಯ ಸಂಕೀರ್ಣದಲ್ಲಿ ಶೌಚಾಲಯವಿದ್ದು, ಇಲ್ಲದಂತಾಗಿರುವುದನ್ನು ನೋಡಿದರೆ ಸರ್ಕಾರದ ಹಣ ಹೇಗೆ ಪೋಲಾಗುತ್ತಿದೆ ಎನ್ನುವುದಕ್ಕೆ ಸ್ಪಷ್ಠ ನಿದರ್ಶನ. ಈಗಲಾದರೂ ಇಲ್ಲಿ ಶೌಚಾಲಯವನ್ನು ತೆರೆದು ಮಹಿಳೆಯರ ಪ್ರಕೃತಿ ಕರೆಗೆ ಅವಕಾಶ ಮಾಡಿಕೊಡುವಂತೆ ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ಎಂ.ಹನೀಫ್, ಕಾರ್ಯಾಧ್ಯಕ್ಷ ಅಬ್ದುಲ್ ನವೀದ್, ಕೆ.ಕೆ.ಎನ್.ಎಸ್.ಎಸ್. ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಇವರುಗಳು ಮನವಿ ಮಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment