ಚಿತ್ರದುರ್ಗ | ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ ವೈ.ಎ.ನಾರಾಯಣ ಸ್ವಾಮಿ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,                         
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನ. 09 :  ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿಯವರು ಇಂದು ನಗರದ ವಿವಿಧ ಕಾಲೇಜುಗಳಿಗೆ ಭೇಟಿ ನೀಡುವುದರ ಮೂಲಕ ಶಿಕ್ಷಕ ಮತ್ತು ಉಪನ್ಯಾಸಕರ ಸಮಸ್ಯೆಯನ್ನು ಆಲಿಸಿದರು.

ನಗರದ ಎಸ್.ಜೆ.ಎಂ.ಐ.ಟಿ,  ಸರ್ಕಾರಿ ಪಾಲಿಟೆಕ್ನಿಕ್, ಸರ್ಕಾರಿ ಐ.ಟಿಐ. ಮತ್ತು ಸದ್ಗುರು ಕಬೀರಾನಂದಾಶ್ರಮದವತಿಯಿಂದ ನಡೆಯುತ್ತಿರುವ ಕಾಲೇಜಿಗೆ ಭೇಟಿ ನೀಡುವುದರ ಮೂಲಕ ಅಲ್ಲಿನ ಶಿಕ್ಷಕರ ಮತ್ತು ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದರು.

ಇದೇ ಸಂದರ್ಭದಲ್ಲಿ ನಗರದ ಶ್ರೀ ಕಬೀರಾನಂದಾಶ್ರಮದ ಪೀಠಾಪಧಿಗಳಾದ ಶ್ರೀ ಶಿವಲಿಂಗಾನಂದ ಶ್ರೀಗಳು ಹುಟ್ಟು ಹಬ್ಬದ ಅಂಗವಾಗಿ ಆಶ್ರಮಕ್ಕೆ ಭೇಟಿ ನೀಡಿದ ನಾರಾಯಣಸ್ವಾಮಿಯವರು ಶಾಲು, ಹಾರಗಳನ್ನು ಅರ್ಪಿಸುವುದರ ಮೂಲಕ ಹುಟ್ಟು ಹಬ್ಬದ ಶುಭ ಕೋರಿದರು.

ಈ ಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿಗಳಾದ ನೀಲಕಂಠಚಾರ್, ನಿವೃತ್ತ ಮುಖ್ಯ ಶಿಕ್ಷಕರಾದ ಜಯ್ಯಣ್ಣ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ, ತಾಲ್ಲೂಕು ಅಧ್ಯಕ್ಷ ಬಸವರಾಜು, ಭೀಮಾರೆಡ್ಡಿ, ಹನುಮಂತಪ್ಪ, ಚಿಕ್ಕ ನಾಗಪ್ಪ, ಎಸ್.ಜೆ.ಎಂ.ಐ.ಟಿ.ಯ ಪ್ರಾಂಶುಪಾಲರಾದ ಭರತ್, ವ್ಯವಸ್ಥಾಪಕರಾದ ಕುಮಾರಸ್ವಾಮಿ ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks