Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ : ದಿಢೀರನೆ ತನಿಖಾಧಿಕಾರಿ ಬದಲಾಗಿದ್ದೇಕೆ… ?

---Advertisement---

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಹದಿಮೂರು ಮಂದಿ ಜೈಲಿನಲ್ಲಿದ್ದಾರೆ. ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಆದರೆ ಇದೀಗ ದಿಢೀರನೇ ತನಿಖಾಧಿಕಾರಿಯನ್ನು ಸರ್ಕಾರ ಬದಲಾವಣೆ ಮಾಡಿದೆ.

ಪ್ರಕರಣ ಬೆಳಕಿಗೆ ಬಂದಾಗಿನಿಂದ ಕಾಮಾಕ್ಷಿಪಾಳ್ಯದ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ ಈಗ ಬದಲಾಗುದ್ದು, ಆ ಜಾಗಕ್ಕೆ ವಿಜಯನಗರದ ಉಪವಿಭಾಗಾಧಿಕಾರಿ ಎಸಿಪಿ ಚಂದನ್ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಚಂದನ್ ಪ್ರಕರಣದ ತನಿಖೆಯನ್ನು ನಡೆಸಲಿದ್ದಾರೆ.

ಗಿರೀಶ್ ಈ ಮೊದಲು ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಲೋಕಸಭಾ ಚುನಾವಣೆಯ ಹಿನ್ನೆಲೆ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಸ್ಟೇಷನ್ ವರ್ಗಾವಣೆ ಮಾಡಲಾಗಿತ್ತು. ಆದರೆ ಇದೀಗ ವಾಪಾಸ್ ಅವರ ಠಾಣೆಗೆ ಹೋಗುವುದಕ್ಕೆ ಆದೇಶ ನೀಡಲಾಗಿದೆ. ಈ ಮಧ್ಯೆ ಕಾಮಾಕ್ಷಿಪಾಳ್ಯದ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ತನಿಖೆಯನ್ನು ಗಿರೀಶ್ ಬಹಳ ಗಂಭೀರವಾಗಿ ಪರಿಗಣಿಸಿದ್ದರು. ಈ ಸಂಬಂಧ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಜನರನ್ನು ಬಂಧಿಸಿ, ಜೈಲಿಗೂ ಅಟ್ಟಿದ್ದಾರೆ.

ಇದೀಗ ಈ ಕೇಸನ್ನು ಚಂದನ್ ಮುಂದುವರೆಸಲಿದ್ದಾರೆ. ದರ್ಶನ್ ಮತ್ತವರ ಗ್ಯಾಂಗ್ ಅನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ತೆಗೆದುಕೊಂಡಿದ್ದಾರೆ. ಈಗಾಗಲೇ ಕೊಲೆಯಾದ ಜಾಗದ ಮಹಜರು ಕೂಡ ಆಗಿದೆ. ಆರೋಪಿಗಳಿಂದ ಏನೆಲ್ಲಾ ಆಯ್ತು ಎಂಬ ಪಿನ್ ಟು ಪಿನ್ ಮಾಹಿತಿಯನ್ನು ಪಡೆಯಲಾಗಿದೆ. ನ್ಯಾಯಾಂಗ ಬಂಧನ ಮುಗಿಯುವುದರೊಳಗಾಗಿ ಕಲೆಹಾಕಿದ ಮಾಹಿತಿಯನ್ನೆಲ್ಲಾ ಕೋರ್ಟ್ ಮುಂದೆ ಇಡಲಿದ್ದಾರೆ. ಬಳಿಕ ಆರೋಪಿಗಳ ಶಿಕ್ಷೆಯ ಬಗ್ಗೆ ಕೋರ್ಟ್ ತೀರ್ಮಾನ ಮಾಡಲಿದೆ‌. ಅತ್ತ ಚಿತ್ರದುರ್ಗದಲ್ಲಿ ಇದ್ದೊಬ್ಬ ಮಗನನ್ನು ಕಳೆದುಕೊಂಡು ಪೋಷಕರು ದುಃಖದಲ್ಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...