Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರಹಳ್ಳಿ : ಮಕ್ಕಳಿಗೆ ನೋಟ್ ಬುಕ್ ವಿತರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್.10 : ಮಕ್ಕಳ ಚೆನ್ನಾಗಿ ಓದಿ ದೇಶದ ಒಳ್ಳೆ ಪ್ರಜೆಗಳಾಗಬೇಕು. ಗ್ರಾಮೀಣ ಮಕ್ಕಳಲ್ಲಿ ವಿದ್ಯಾಭ್ಯಾಸದಲ್ಲಿ ಹೆಚ್ಚು ಶಕ್ತಿ ಇದೆ ಎಂದು ಜಿ ಎಂ ಲವಕುಮಾರ್ ಸಮಾಜ ಸೇವಕರು ಹೇಳಿದರು.

ತಾಲ್ಲೂಕಿನ ಭೀಮಸಮುದ್ರ ಸಮೀಪದ ಚಿತ್ರಹಳ್ಳಿ ಗ್ರಾಮದಲ್ಲಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಭಾಗವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸರ್ಕಾರ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ನೀಡುತ್ತದೆ. ಆದರೆ ಅವರಿಗೆ ಬೇಕಾದ ನೋಟ್ ಬುಕ್, ಪೆನ್ನು, ರಬ್ಬರ್, ಪೆನ್ಸಿಲ್, ಜಾಮೆಂಟರಿ ಬಾಕ್ಸ್ ನೀಡಿದ್ದೇವೆ. ಸತತ 4ನೇ ವರ್ಷ ಈ ಕಾರ್ಯಕ್ರಮವನ್ನು ಮಾಡಿಕೊಂಡು ಬರುತ್ತಿದ್ದೇನೆ. ಸುಮಾರು 400 ಜನ ಮಕ್ಕಳಿಗೆ ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಇದರಿಂದ ಮಕ್ಕಳು ಚೆನ್ನಾಗಿ ಓದಿ ಶಾಲೆಗೆ ಹಾಗೂ ತಂದೆ ತಾಯಿಗಳಿಗೆ ಒಳ್ಳೆಯ ವಿದ್ಯಾರ್ಥಿಗಳಾಗಬೇಕು
ಸಮಾಜದಲ್ಲಿ ಅದೆಷ್ಟೋ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಿದ್ದಾರೆ ತಂದೆ ತಾಯಿಗಳು ಮಕ್ಕಳನ್ನು ಶಾಲೆಗೆ ಕಳಿಸಬೇಕು ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೇಯಲ್ ಗೌಡ, ಮುಖ್ಯ ಶಿಕ್ಷಕರಾದ ಗಾಯತ್ರಿ ಪ್ರಭಾಕರ್, ವೀಣಾ, ಮಲ್ಲೇಶ್ವರಪ್ಪ, ದಿವ್ಯಾ ಹಾಗೂ ಗ್ರಾಮಸ್ಥರು ಪೋಷಕರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...