Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಚೌ ಚೌ ಬಾತ್’ ಟ್ರೇಲರ್ ರಿಲೀಸ್ : ಹೊಸತನವನ್ನೇ ಬಚ್ಚಿಟ್ಟುಕೊಂಡಿರುವ ಸಿನಿಮಾವಿದು

Facebook
Twitter
Telegram
WhatsApp

ಪ್ರೇಕ್ಷಕರಿಗೆ ಹೊಸತನದ ಸಿನಿಮಾದ ಅಗತ್ಯವಿದೆ. ಹೀಗಾಗಿ ಪ್ರೇಕ್ಷಜರ ನಾಡಿಮಿಡಿತ ಅರಿತ ನಿರ್ದೇಶಕ ಕೇಂಜ ಚೇತನ್ ಕುಮಾರ್ ‘ಚೌ ಚೌ ಬಾತ್’ ಉಣಬಡಿಸಲು ಸಿದ್ದರಾಗಿದ್ದಾರೆ. ಸದ್ಯ ಇಂದು ಅದರ ಟ್ರೇಲರ್ ಬಿಟ್ಟು ರುಚಿ ತೋರಿಸಿದ್ದಾರೆ. ಟ್ರೇಲರ್ ನೋಡಿದಾಗಲೇ ಹೊಸತನದ ಅನುಭವವಾಗಿದೆ.

ಇಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾ ನಿರ್ಮಾಪಕ ಸತೀಶ್ ಎಸ್.ಬಿ ಅವರು ತಮ್ಮ ಪತ್ನಿಯೊಂದಿಗೆ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಸಿನಿಮಾ ತಂಡಕ್ಕೆ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ ಅವಿನಾಶ್ ಶೆಟ್ಟಿ ಸಪೋರ್ಟ್ ನೀಡಿದ್ದು, ಶುಭ ಹಾರೈಸಿದ್ದಾರೆ.

ಸಿನಿಮಾ ಆರಂಭದಿಂದಾನೂ ಕುತೂಹಲವನ್ನು ಕಾಯ್ದಿರಿಸಿತ್ತು. ಈಗ ಟ್ರೇಲರ್ ಬಿಡುಗಡೆ ಮೂಲಕ ಆ ಕೌತುಕ ಮತ್ತಷ್ಟು ಹೆಚ್ಚಾಗಿದೆ. ಚೌ ಚೌ ಬಾತ್ ಕನ್ನಡದ ಮಟ್ಟಿಗೆ ಅನೇಕ ಮೊದಲುಗಳನ್ನು, ಹೊಸತನವನ್ನು ಬಚ್ಚಿಟ್ಟುಕೊಂಡಿರುವ ಸಿನಿಮಾ. ಅದು ಕನ್ನಡದ ಮೊಟ್ಟ ಮೊದಲ ಹೈಪರ್ ಲಿಂಕ್ ರಾಮ್‌ ಕಾಮ್‌ ಮಾದರಿಯ ಚಿತ್ರವೆಂಬ ಮಾಹಿತಿಯನ್ನೂ ಕೂಡಾ ನಿರ್ದೇಶಕರು ತೆರೆದಿಟ್ಟಿದ್ದಾರೆ. ಸನಾತನಯ್ ಪಿಕ್ಚರ್ಸ್ ಮತ್ತು ಕಾಮಧೇನು ಫಿಲಂಸ್ ಅರ್ಪಿಸುವ ಈ ಚಿತ್ರ ,ಹಾರಿಜಾನ್ ಮೂವೀಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿದೆ.

ಹೇಮಂತ್ ಜೋಯಿಸ್ ಸಂಗೀತ ನಿರ್ದೇಶನ, ರುದ್ರಮೂರ್ತಿ ಬೆಳಗೆರೆ ಛಾಯಾಗ್ರಹಣ, ಪ್ರಮೋದ್ ಮರವಂತೆ ಗೀತ ಸಾಹಿತ್ಯವಿರುವ ಈ ಚಿತ್ರದ ಸಂಕಲನದ ಜವಾಬ್ದಾರಿಯನ್ನು ಖುದ್ದು ಕೇಂಜ ಚೇತನ್ ಕುಮಾರ್ ಅವರೇ ನಿಭಾಯಿಸಿದ್ದಾರೆ. ಸಾಗರ್ ಗೌಡ, ಸಂಕಲ್ಪ್ ಶರ್ಮಾ, ಸುಶ್ಮಿತಾ ಭಟ್, ಅರುಣಾ ಬಾಲರಾಜ್, ಧನುಶ್ ಬೈಕಂಪಾಡಿ, ಗೀತಾ ಬಂಗೇರ, ಪ್ರಕರ್ಷ ಶಾಸ್ತ್ರಿ ಮುಂತಾದವರ ತಾರಾಗಣವನ್ನು ಈ ಸಿನಿಮಾ ಒಳಗೊಂಡಿದೆ. ಸತೀಶ್ ಎಸ್.ಬಿ, ಸಂಕಲ್ಪ್ ಶರ್ಮಾ, ಪೂರ್ಣಚಂದ್ರ, ದ ಜೋಯ್ಸ್ ಪ್ರಾಜೆಕ್ಟ್, ಅಶೋಕ್ ಡಿ ಶೆಟ್ಟಿ, ಓಂ ಸ್ಟುಡಿಯೋ ಸಹ ನಿರ್ಮಾಣದೊಂದಿಗೆ `ಚೌ ಚೌ ಬಾತ್’ ಚಿತ್ರ ಮೂಡಿ ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!