Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೈಲಿಂದ ರಿಲೀಸ್ ಆದ್ಮೇಲೆ ಸಿಟಿ ರವಿ ಸುದ್ದಿಗೋಷ್ಟಿ : ಪೊಲೀಸರ ಬಗ್ಗೆ ಹೇಳಿದ್ದೇನು..?

---Advertisement---

ದಾವಣಗೆರೆ: ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಕೆಟ್ಟ ಪದ ಬಳಕೆ ಮಾಡಿದ್ದರು ಎಂಬ ಕಾರಣದಿಂದ ಬಿಜೆಪಿ ಎಂಎಲ್ಸಿ ಸಿಟಿ ರವಿ ಅರೆಸ್ಟ್ ಆಗಿದ್ದರು. ಬೆಳಗಾವಿ ನ್ಯಾಯಾಲಯ ಜಾಮೀನು ಅರ್ಜಿ ಕ್ಯಾನ್ಸಲ್ ಮಾಡಿ ಬೆಂಗಳೂರು ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿತ್ತು. ಸಿಟಿ ರವಿ ಪರ ವಕೀಲರು ತಕ್ಷಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡ ಹೈಕೋರ್ಟ್ ನ್ಯಾಯಾಧೀಶರು ಜಾಮೀನು ನೀಡಿದರು. ಜಾಮೀನು ಪಡೆದ ಸಿಟಿ ರವಿ ಅವರು ದಾವಣಗೆರೆಯಲ್ಲಿ ಸುದ್ದಿಗೋಷ್ಟಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಜೊತೆಗಿದ್ದರು. ಈ ವೇಳೆ ಸಿಟಿ ರವಿ‌ಮಾತನಾಡಿ, ನಾಲ್ಕು ಜಿಲ್ಲೆ.. ಐವತ್ತಕ್ಕೂ ಹೆಚ್ಚು ಗ್ರಾಮಗಳನ್ನ ಅಲೆದಾಡಿಸಿ.. ಮಾನಸಿಕವಾಗಿ, ದೈಹಿಕವಾಗಿ ಹಿಂಸೆ ಕೊಟ್ಟಿದ್ದಾರೆ. ಕೆಲವರ ಸೂಚನೆ ಮೇರೆಗೆ ನಡೆದುಕೊಳ್ಳಲಾಗಿದೆ. ನಮ್ಮ ಪಾರ್ಟಿ, ರಾಜ್ಯಾಧ್ಯಕ್ಷರು, ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರು ಸೇರಿದಂತೆ ಸಾಮಾನ್ಯ ಕಾರ್ಯಕರ್ತರು ಕೂಡ ನನ್ನ ಜೊತೆಗೆ ನಿಂತರು. ಜಡ್ಜ್ ಮೆಂಟ್ ವಿಚಾರಕ್ಕೆ ಒಂದೇ ಹೇಳೋದು ಸತ್ಯ ಮೇವ ಜಯತೆ ಅನ್ನೋದು. ಇಂದು ಸತ್ಯಕ್ಕೆ ಜಯ ಸಿಕ್ಕಿದೆ. ನೀವೂ ಕೊಟ್ಟಂತ ಹಿಂಸೆ ಮೂವತ್ತು ವರ್ಷಗಳ ಹಿಂದಿನಿಂದ ನೋಡಿದ್ದೀವಿ. ನೀವೂ ಕೊಡುವ ತೊಂದರೆ ಇನ್ನಷ್ಟು ಹೋರಾಟ ಮಾಡುವ ಶಕ್ತಿ ಕೊಡುತ್ತದೆ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಾತನಾಡಿ, ನಿನ್ನೆಯಿಂದ ಇಪ್ಪತ್ತು ನಾಲ್ಕು ಗಂಟೆಗಳ ಕಾಲ ಈ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನತೆಗೆ ತೋರಿಸಿದ್ದೀರಿ. ಅದಕ್ಕೆ ನಿಮಗೆಲ್ಲ ಧನ್ಯವಾದಗಳನ್ನ ತಿಳಿಸುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೆದ್ ಸರ್ಕಾರದ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...