ಬಿಗ್ ಬಾಸ್ ಮನೆಯಲ್ಲಿ ಸಿಕ್ಕಿಬಿದ್ದ ಚಾರ್ಜರ್ ಬಗ್ಗೆ ಸ್ಪರ್ಧಿಗಳಿಂದ ಸ್ಪಷ್ಟನೆ..!

ಬಿಗ್ ಬಾಸ್ ಮನೆಯಲ್ಲಿ ನೂರು ದಿನಗಳ ಕಾಲ ಆಟವಿರುತ್ತದೆ. ಆ ಆಟದಲ್ಲಿ ಎಲ್ಲಾ ಕಡೆಯಿಂದಾನೂ ವೋಟ್ ಪಡೆದವರು ಕಡೆಯಲ್ಲಿ ವಿನ್ ಆಗುತ್ತಾರೆ. ಬಿಗ್ ಬಾಸ್ ಮನೆಯಲ್ಲಿ ಎಷ್ಟು ದಿನ ಇರುತ್ತಾರೋ ಅಷ್ಟು ದಿನವೂ ಜನರ ಸಂಪರ್ಕವಿರುವುದಿಲ್ಲ, ಫೋನ್ ಬಳಕೆ ಮೊದಲೇ ಮಾಡುವಂತೆ ಇಲ್ಲ. ಹೀಗಿರುವಾಗ ಬಿಗ್ ಬಾಸ್ ಮನೆಯಲ್ಲಿ ಮೊಬೈಲ್ ಚಾರ್ಜರ್ ಜನರ ಕಣ್ಣಿಗೆ ಬಿದ್ದಿತ್ತು.

https://www.instagram.com/reel/C1MVJWWryGn/?igsh=MzRlODBiNWFlZA==

ಇದನ್ನು ಕಂಡ ಹಲವರು, ಹಲವು ರೀತಿಯ ಕಮೆಂಟ್ ಗಳನ್ನು ಹಾಕುತ್ತಿದ್ದರು. ಬಿಗ್ ಬಾಸ್ ಸ್ಪರ್ಧಿಗಳು ನಿಜಕ್ಕೂ ಮೊಬೈಲ್ ಬಳಕೆ ಮಾಡುತ್ತಿದ್ದಾರಾ ಎಂಬ ಅನುಮಾನ ಶುರುವಾಗಿತ್ತು. ಜೊತೆಗೆ ಟ್ರಿಮ್ಮರ್ ಗಳ ಚಾರ್ಜರ್ ಇರಬಹುದು ಎಂಬ ಊಹೆ ಸಹ ಕೇಳಿ ಬಂದಿತ್ತು. ಇದೀಗ ಈ ವಿಚಾರಕ್ಕೆ ಬಿಗ್ ಬಾಸ್ ಮನೆ ಮಂದಿಯೇ ಸಾಕ್ಷಿ ಸಮೇತ ಸ್ಪಷ್ಟನೆ ನೀಡಿದ್ದಾರೆ.

ಇಂದು ಕಿಚ್ಚನ ಪಂಚಾಯ್ತಿ ಇರುವುದಿಲ್ಲ. ಬದಲಿಗೆ ಹಿರಿಯ ನಟಿ ಶೃತಿ ಅವರು ಬಿಗ್ ಬಾಸ್ ಮನೆಯೊಳಗೆ ಬಂದಿದ್ದಾರೆ. ಸ್ಪರ್ಧಿಗಳನ್ನು ಆಕ್ಟೀವ್ ಮಾಡಿದ್ದಾರೆ. ಈ ವೇಳೆ ಬಿಗ್ ಬಾಸ್ ಮಂದಿ ಮೊಬೈಲ್ ಬಳಕೆ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಕೇಳಿದ್ದಾರೆ. ಎಲ್ಲರು ಅದನ್ನು ತಮಾಷೆಯಾಗಿ ತೆಗೆದುಕೊಂಡಿದ್ದಾರೆ. ಶೃತಿ ಅವರು ಅದರ ಸೀರಿಯಸ್ ನೆಸ್ ತಿಳಿಸಿದ್ದಾರೆ. ಬಿಗ್ ಬಾಸ್ ಆ ಫೋಟೋ ಹಾಕಿದ್ದಾರೆ. ಆಗ ಮನೆಯಲ್ಲಿ ಎಲ್ಲ ನಕ್ಕು, ಇದು ಮೊಬೈಲ್ ಗೆ ಬಳಸುತ್ತಿರುವ ಚಾರ್ಜರ್ ಅಲ್ಲ, ಬದಲಿಗೆ ಟ್ರಿಮ್ ಮಾಡುವುದಕ್ಕೆ ಬಳಸುತ್ತಿರುವ ಚಾರ್ಜರ್ ಎಂದು ಮೈಕಲ್ ಹಾಗೂ ವಿನಯ್ ಸಾಕ್ಷಿ ಸಮೇತ ತೋರಿಸಿದ್ದಾರೆ.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

1 hour ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

3 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

3 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

3 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago