ವಿಜಯೇಂದ್ರ ಅವರ ಪದಗ್ರಹಣಕ್ಕೆ ಗೈರಾಗಿದ್ದ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಹಾಜರಾಗಿದ್ದಕ್ಕೆ ಸ್ಪಷ್ಟನೆ

suddionenews
1 Min Read

 

ಬೆಂಗಳೂರು: ಇಂದು ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕಾರ ಮಾಡಿದ್ದಾರೆ. ಬಿಜೆಪಿಯಲ್ಲಿ ಈ ವಿಚಾರಕ್ಕೆ ಹಲವರಿಗೆ ಅಸಮಾಧಾನವಿದೆ. ಅದು ಪದಗ್ರಹಣದಲ್ಲೂ ಎದ್ದು ಕಾಣುತ್ತಿದೆ. ಈ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರೇ ಗೈರಾಗಿದ್ದರು. ಎಸ್ ಟಿ ಸೋಮಶೇಖರ್ ಕೂಡ ಗೈರಾಗಿದ್ದರು. ಆದರೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದದ್ದು ಗಮನ ಸೆಳೆದಿತ್ತು‌.

 

ಕುಂಬಳಗೋಡು ಪೊಲೀಸ್ ಠಾಣೆ ಉದ್ಘಾಟೆನಯಲ್ಲಿ ಭಾಗಿಯಾಗಿದ್ದ ಎಸ್ ಟಿ ಸೋಮಶೇಖರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ‌. ನನಗೆ ಈ ಕಾರ್ಯಕ್ರಮ ಮೊದಲೇ ನಿಗದಿಯಾಗಿತ್ತು. ಹಾಗಾಗಿ ಬಂದಿದ್ದೇನೆ ಎಂದಿದ್ದರು. ನನ್ನನ್ನು ಪಕ್ಷದಲ್ಲಿ ಯಾರೇ ಕಡೆಗಣಿಸಲಿ, ಕ್ಷೇತ್ರದ ಜನರು ಜೊತೆಗಿದ್ದಾರೆ. ನನ್ನ ಬಗ್ಗೆ ಮಾತನಾಡಿದ ರಾಷ್ಟ್ರೀಯ ನಾಯಕರು ಯಾವ ಪರಿಸ್ಥಿತಿಯಲ್ಲಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

 

ಆರು ತಿಂಗಳ ಬಳಿಕ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹುದ್ದೆಗೆ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಇಂದು ಅಧಿಕೃತವಾಗಿ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಕೂಡ ನಡೆದಿದೆ‌. ಮುಂದೆ ದೊಡ್ಡ ಕಾರ್ಯಕ್ರಮ ಮಾಡಿ, ಕೇಂದ್ರ ನಾಯಕರನ್ನು ಕರೆಸುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಕರೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *