ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತ ಕೇಸ್ ಗೆ ಇದೀಗ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಮೂಡಾ ಪ್ರಕರಣದ ತನಿಖೆ ನಡೆಸುತ್ತಿದ್ದ ಇಡಿಯ ಸಂಪೂರ್ಣ ತನಿಖೆ ಮುಗಿದಿದೆ. ಈ ಸಂಬಂಧ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದು, ಈ ಕೇಸಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಎಲ್ಲಿಯೂ ಇಲ್ಲ ಎಂದು ತಿಳಿಸಲಾಗಿದೆ.
1994ರಿಂದ ಆಗಿರುವಂತ ಬೆಳವಣಿಗೆ ಇದಾಗಿದೆ. ಡಿನೋಟಿಫೈ ಮಾಡಬೇಕಾದರೆ, ಭೂ ಪರಿವರ್ತನೆ ಮಾಡುವಾಗ ನಿಯಮ ಉಲ್ಲಂಘನೆಯನ್ನು ಅಧಿಕಾರಿಗಳು ಮಾಡಿದ್ದಾರೆ. ಮೂಡಾ ಆಯುಕ್ತರು, ರೆವೆನ್ಯೂ ಅಧಿಕಾರಿಗಳು ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆಂದು ತನಿಖೆಯಲ್ಲಿ ತಿಳಿಸಲಾಗಿದೆ. ಸೋಮವಾರ ಲೋಕಾಯುಕ್ತ ವರದಿಯನ್ನು ಕೋರ್ಟ್ ಗೆ ವರದಿಯನ್ನು ಸಲ್ಲಿಸಲಾಗುತ್ತದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಫಸ್ಟ್ ರಿಯಾಕ್ಷನ್ ಕೊಟ್ಟಿದ್ದು, ನಂಗೆ ಗೊತ್ತಿಲ್ಲ ರೀ.. ನಂಗೊತ್ತಿಲ್ಲ ಎಂದು ಹೇಳಿ ಮುನ್ನಡೆದಿದ್ದಾರೆ.
ಈ ಸಂಬಂಧ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಪ್ರತಿಕ್ರಿಯೆ ನೀಡಿದ್ದು, ನನಗೆ ಇದು ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ನ್ಯಾಯಾಲಯಕ್ಕೆ ಸಲ್ಲಿಸಿರುವ ದಾಖಲಾತಿಯಲ್ಲಿ ಅವರು ಅಪರಾಧ ಎಸಗಿದ್ದಾರೆ ಎಂಬುದಕ್ಕೆ ದಾಖಲೆ ಇದೆ. ಅವರ ಅಧಿಕಾರದ ಅವಧಿಯಲ್ಲಿಯೇ ಕೃತ್ಯಗಳು ನಡೆದಿರುವುದು. ಅವರ ಪ್ರಭಾವ ಇಲ್ಲದೆ ಅಧಿಕಾರಿಗಳು ಅಪರಾಧ ಎಸಗಲು ಸಾಧ್ಯವಿಲ್ಲ. ಲೋಕಾಯುಕ್ತರು ಸಿದ್ದರಾಮಯ್ಯ ಅವರ ಪಾತ್ರ ಇಲ್ಲ ಎಂದು ಹೇಳುವಂತೆ ಇಲ್ಲ. ಒಂದು ವೇಳೆ ಹೇಳಿದರು, ನಮ್ಮ ಬಳಿ ಅದನ್ನ ಪ್ರೂವ್ ಮಾಡುವುದಕ್ಕೆ ಸಾಕ್ಷಿಗಳು ಇದಾವೆ. ಹೋರಾಟ ಮುಂದುವರೆಸುತ್ತೇವೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















