ಚಿತ್ರದುರ್ಗದ ಐತಿಹಾಸಿಕ ಕೋಟೆ ಆವರಣದಲ್ಲಿ ಸ್ವಚ್ಛತಾ ಕಾರ್ಯ

0 Min Read

 

ಚಿತ್ರದುರ್ಗ, ಅ.01: ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ ಹಾಗೂ ನಗರಸಭೆ ಸಹಯೋಗದಲ್ಲಿ ಭಾನುವಾರ ನಗರದ ಐತಿಹಾಸಿಕ ಕೋಟೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

ಉಪವಿಭಾಗಾಧಿಕಾರಿ ಎಂ.ಕಾರ್ತೀಕ್ ಅವರು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ಸ್ವಚ್ಛತಾ ಪ್ರತಿಜ್ಞೆ ಬೋಧಿಸಿದರು. ನಗರಸಭೆ ಪೌರಾಯುಕ್ತೆ ರೇಣುಕಾ, ಬಾಲಕಿಯರ ಸರ್ಕಾರಿ  ಪದವಿಪೂರ್ವ ಕಾಲೇಜು ಪ್ರಾಂಶುಪಾಲ ನಾಗರಾಜ ಸೇರಿದಂತೆ ನಗರದ ಸ್ತ್ರೀ ಶಕ್ತಿ ಸಂಘದ ಸದಸ್ಯರು, ನಗರಸಭೆ ಆರೋಗ್ಯ ನೀರೀಕ್ಷಕರು, ಪೌರಕಾರ್ಮಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks