Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ವಚ್ಛತೆಯಿಂದ ಆರೋಗ್ಯ ವೃದ್ಧಿ ಮತ್ತು ದೇಶದ ಅಭಿವೃದ್ಧಿ | ಅಮೃತಾಪುರದಲ್ಲಿ ಸ್ವಚ್ಛ ಭಾರತ ಅಭಿಯಾನ

---Advertisement---

 

ಸುದ್ದಿಒನ್, ಹೊಳಲ್ಕೆರೆ, ಸೆಪ್ಟೆಂಬರ್.27  : ಹಣ ಆಸ್ತಿ ಅಧಿಕಾರ ಭಾಗ್ಯಗಳಿಗಿಂತ ಆರೋಗ್ಯವೇ ಶ್ರೇಷ್ಠ ಭಾಗ್ಯವಾಗಿದೆ. ಆರೋಗ್ಯವಿದ್ದರೆ ಉಳಿದೆಲ್ಲ ಭಾಗ್ಯಗಳ ಪಡೆಯಬಹುದು. ನಮ್ಮ ಪರಿಸರ ಸ್ವಚ್ಛತೆಯಿಂದ ಆರೋಗ್ಯದ ವೃದ್ಧಿಯಾಗುವುದು. ಆರೋಗ್ಯ ವೃದ್ಧಿಯಿಂದ ದೇಶದ ಅಭಿವೃದ್ಧಿಯೂ ಸಾಧ್ಯ ಎಂದು ಶಿಕ್ಷಕ ಟಿ.ಪಿ.ಉಮೇಶ್ ಹೇಳಿದರು.

ಅಮೃತಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛ ಭಾರತ ಅಭಿಯಾನ-ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ನಮ್ಮ ವೈಯುಕ್ತಿಕ ಸ್ವಚ್ಛತೆಯ ಜೊತೆಗೆ ನಮ್ಮ ಶಾಲೆಯ ಒಳ ಹೊರಗೆ, ವಾಸಿಸುವ ಮನೆಯ ಸುತ್ತಮುತ್ತ ಸದಾ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕಸಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ, ಹಸಿಕಸ ಒಣಕಸ ರಾಸಾಯನಿಕ ಕಸಗಳನ್ನು ಸೂಕ್ತವಾಗಿ ಸಂಗ್ರಹಿಸಿ ವಿಲೇವಾರಿ ಮಾಡುವ ಮೂಲಕ ನಮ್ಮ ಗ್ರಾಮವನ್ನು ಸ್ವಚ್ಚ ಗ್ರಾಮವಾಗಿ ಪರಿವರ್ತಿಸಬಹುದು. ಎಲ್ಲ ಗ್ರಾಮ ನಗರಗಳ ಸ್ವಚ್ಛತೆಯಿಂದ ತ್ಯಾಜ್ಯ ಮುಕ್ತ ದೇಶವಾಗಿ ಭಾರತ ಸ್ವಚ್ಛ ದೇಶವಾಗುವುದು.

ಸ್ವಚ್ಚತೆಯಿಂದ ಜನರ ಆರೋಗ್ಯಮಟ್ಟ ಸುಧಾರಣೆಯಾಗಿ ಹೆಚ್ಚು ಕೆಲಸ ಮಾಡಲು ಸಾಧ್ಯವಾಗುವುದು. ಅಲ್ಲದೆ ಸ್ವಚ್ಛತೆಯುಳ್ಳ ದೇಶದ ಪ್ರವಾಸಿ ಪ್ರೇಕ್ಷಣೀಯ ತಾಣಗಳಿಗೆ ಹೊರದೇಶದ ನಾಗರೀಕರು ಆಗಮಿಸುವುದರಿಂದ ಮತ್ತು ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಊಡಲು ಉದ್ಯಮಿಗಳು ಆಸಕ್ತಿ ತೋರುವುದರಿಂದ ನಮ್ಮ ಜನರಿಗೆ ಉದ್ಯೋಗ ಸೌಲಭ್ಯ ಹೆಚ್ಚಿ ಆರ್ಥಿಕ ಪ್ರಗತಿಯೂ ಸಾಧ್ಯವಾಗಿ ದೇಶ ಅಭಿವೃದ್ಧಿಯೆಡೆ ಸಾಗುವುದು. ನಮ್ಮ ಜೀವನದ ಮೊದಲ ಧ್ಯೇಯ ಸ್ವಚ್ಛತೆಯ ಕಾಪಾಡುವುದೆ ಆಗಬೇಕು ಎಂದು ಹೇಳಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಡಿ.ಸಿದ್ದಪ್ಪರವರು ವಿದ್ಯಾರ್ಥಿಗಳಿಗೆ ಸ್ವಚ್ಛ ಭಾರತ ಕಾರ್ಯಕ್ರಮದ ಪ್ರತಿಜ್ಞಾ ವಿಧಿ ಬೋಧಿಸಿ ಅಕ್ಟೋಬರ್ 2 ರಂದು ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುವೆವು. ಅದರ ಪೂರ್ವ ತಯಾರಿಯಾಗಿ ಇಂದು ಸ್ವಚ್ಛತೆಯ ಪ್ರತಿಜ್ಞಾ ವಿಧಿ ಸಂಕಲ್ಪ ಮಾಡಿದ್ದೇವೆ ಎಂದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರಾದ ಚಂದ್ರಪ್ಪ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment