Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಡಿವೈಡರ್ ತೆರವುಗೊಳಿಸಿ ಫುಟ್‍ಪಾತ್ ನಿರ್ಮಿಸಿ : ಕರುನಾಡ ವಿಜಯಸೇನೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.13 : ನಗರದಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಡಿವೈಡರ್ ತೆರವುಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ವಿಶಾಲವಾದ ರಸ್ತೆ ಹಾಗೂ ಫುಟ್‍ಪಾತ್ ನಿರ್ಮಿಸಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭಾಧ್ಯಕ್ಷ ಹಾಗೂ ರಾಜ್ಯದ ಮುಖ್ಯಮಂತ್ರಿಯವರ ಗಮನ ಸೆಳೆದು ಚಿತ್ರದುರ್ಗದಲ್ಲಿ ಡಿವೈಡರ್ ತೆರವುಗೊಳಿಸಲು ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡುವಂತೆ ಮನವಿ ಮಾಡಿರುವುದು ಸ್ವಾಗತಾರ್ಹ.

ರಾಜಕಾರಣಿಗಳು ಹಾಗೂ ಅಧಿಕಾರಿಗಳ ನಡುವೆ ಸಹಕಾರವಿಲ್ಲದ ಕಾರಣ ಚಿತ್ರದುರ್ಗ ಅಭಿವೃದ್ದಿ ಕಾಣದೆ ಕುಂಠಿತಗೊಳ್ಳುತ್ತಲೆ ಬರುತ್ತಿದೆ.

ಚಳ್ಳಕೆರೆ ಟೋಲ್‍ಗೇಟ್‍ನಿಂದ ಪ್ರವಾಸಿ ಮಂದಿರದವರೆಗೆ ಮಾರ್ಕ್‍ಗೆ ಅನುಗುಣವಾಗಿ ರಸ್ತೆ ಅಗಲೀಕರಣವಾಗಿಲ್ಲ. ಹೊಳಲ್ಕೆರೆ ರಸ್ತೆ, ದಾವಣಗೆರೆ ರಸ್ತೆ, ಮೆದೇಹಳ್ಳಿ ರಸ್ತೆ ಹಾಗೂ ಜೆಸಿಆರ್. ಜೋಗಿಮಟ್ಟಿ ರಸ್ತೆ ಕೂಡ ಗುರುತು ಮಾಡಿದಷ್ಟು ಅಗಲೀಕರಣವಾಗಿಲ್ಲ.

ಎರಡು ಬಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದ್ದರೂ ರಸ್ತೆ ಅಗಲೀಕರಣದಲ್ಲಿ ಆಗಿರುವ ತಾರತಮ್ಯ ಮಾತ್ರ ನಿವಾರಣೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಸ್.ಬಿ.ಎಂ. ಸರ್ಕಲ್‍ನಲ್ಲಿ ಅವೈಜ್ಞಾನಿಕ ಸಿಗ್ನಲ್‍ಲೈಟ್ ಅಳವಡಿಸಿರುವುದರಿಂದ ವೃದ್ದರು, ಮಹಿಳೆಯರು, ಮಕ್ಕಳು ರಸ್ತೆ ದಾಟುವುದು ಕಷ್ಟವಾಗಿದೆ. ಚಂದ್ರವಳ್ಳಿಯಲ್ಲಿ ವೈಜ್ಞಾನಿಕ ಹಂಪ್ಸ್‍ಗಳಿವೆ.

ತುರುವನೂರು ರಸ್ತೆಯಲ್ಲಿ ಬೈಕ್, ಕಾರ್ ಶೋರೂಂನವರು ರಸ್ತೆ ಅತಿಕ್ರಮಣ ಮಾಡಿಕೊಂಡು ವಾಹನಗಳನ್ನು ನಿಲ್ಲಿಸುವುದರಿಂದ ಓಡಾಟಕ್ಕೆ ಅಡಚಣೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆಯವರು ರಸ್ತೆ, ಫುಟ್‍ಪಾತ್‍ಗಳನ್ನು ನುಂಗಿ ನೀರು ಕುಡಿದಿದ್ದಾರೆಂದು ಕೆ.ಟಿ.ಶಿವಕುಮಾರ್ ಆಪಾದಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್ ಸಿ. ಸುರೇಶ್, ಅಖಿಲೇಶ್, ಮಹಮದ್ ರಫಿ, ಶಾನ್, ಅವಿನಾಶ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...