Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೋಡಕವಿದ ವಾತಾವರಣ ಮುಂದುವರಿಕೆ : ಡಿ.5ರವರೆಗೂ ಮಳೆಯಾಗುವ ಮುನ್ಸೂಚನೆ

---Advertisement---

ಇತ್ತಿಚೆಗೆ ವರುಣ ರಾಯ ಕೃಪೆ ತೋರುತ್ತಿದ್ದಾನೆ ಎಂಬಂತೆ ಕಾಣುತ್ತಿದೆ. ಮಳೆ ಅಲ್ಲಲ್ಲಿ ಜೋರಾಗಿದೆ. ಆದರೆ ಈಗ ಬರುತ್ತಿರುವ ಮಳೆಗಾಗಿ ರೈತ ನಿಜಕ್ಕೂ ಕಾಯುತ್ತಿಲ್ಲ. ಈಗ ಮಳೆ ಬಾರದೆ ಇದ್ದರೆ ಸೂಕ್ತ ಎಂದು ಭಾವಿಸುವಾಗಲೇ ಜೋರು ಮಳೆಯಾಗುತ್ತಿದೆ. ಬೆಳೆದ ಬೆಳೆ ಅಷ್ಟೊ ಇಷ್ಟೋ ಕೈಗೆ ಬರುವಾಗ, ಮಳೆರಾಯನಿಂದ ಬೆಳೆಹಾನಿಯಾಗುವ ಸಾಧ್ಯತೆ ಇದೆ. ಭೂಮಿಗೆ ಬೀಜ ಬಿತ್ತಿ, ಅದು ಮೊಳಕೆಯೊಡೆದಾಗ ಬಾರದ ಮಳೆ ಕೈಗೆ ಸಿಗುವ ಬೆಳೆಯನ್ನು ಸರಿಯಾಗಿ ಸಿಗುವುದಕ್ಕೆ ಬಿಡುತ್ತಿಲ್ಲ. ಹೀಗಾಗಿ ಹಿಂಗಾರು ಮಳೆಯಿಂದ ರೈತ ನೊಂದಿದ್ದಾನೆ. ಇನ್ನು ಒಂದು ವಾರಗಳ ಕಾಲ‌ ಅಲ್ಲಲ್ಲಿ ಮಳೆಯಾಗುವ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

 

ಡಿಸೆಂಬರ್ 5ರ ತನಕ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿದೆ ಹವಮಾನ ಇಲಾಖೆ. ಡಿಸೆಂಬರ್ 1 ರಂದು ಕೂಡ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಂದು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು ವಿಜಯನಗರಗಳಲ್ಲಿ ಮಳೆ ಸಾಧ್ಯತೆ ಇದೆ. ಸದ್ಯಕ್ಕೆ ಬೆಳೆ ಕೊಯ್ಲು ಮಾಡುವ ಸಮಯ. ಕೊಯ್ದು ಒಣಗಿಸಬೇಕು ಎನ್ನುವಾಗಲೇ ಎಷ್ಟೋ ಕಡೆ ಮಳೆ ಬಂದಿದೆ. ಕೊಯ್ದು ಕಣಕ್ಕೆ ಹಾಕಿರುವ ಬೆಳೆಯ ಮೇಲೂ ಎಷ್ಟೊ ಕಡೆ ವರುಣರಾಯ ಮಿಂದೆದ್ದು ಹೋಗಿದ್ದಾನೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment