Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸದನಕ್ಕೆ ಗೈರು ; ವಿಪಕ್ಷಗಳು ರಾಂಗ್.. ಕೈ ಮುಗಿದ ಚೆಲುವರಾಯಸ್ವಾಮಿ

---Advertisement---

ಬೆಂಗಳೂರು; ಸದನದಲ್ಲಿ ಸದ್ಯ ಬಜೆಟ್ ಮೇಲಿನ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದಲ್ಲಿ ಆಡಳಿತ ಪಕ್ಷ ವಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರು ಸದನಕ್ಕೆ ಇಂದು ಗೈರಾಗಿರುವುದನ್ನೇ ಇಟ್ಟುಕೊಂಡು ವಿಪಕ್ಷಗಳು ಟಾರ್ಗೆಟ್ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಬರಲೇಬೇಕೆಂದು ಒತ್ತಾಯ ಮಾಡಿದ್ದಾರೆ. ಈ ವಿಚಾರ ಸದನದಲ್ಲಿ ಗದ್ದಲ ಉಂಟು ಮಾಡಿದೆ.

ಅಶ್ವತ್ಥ್ ನಾರಾಯಣ್ ಈ ವೇಳೆ ಮಾತನಾಡುತ್ತಾ ಬಜೆಟ್ ಅಧಿವೇಶನದಲ್ಲಿ ಮುಖ್ಯಮಂತ್ರಿ ಅವರೇ ಇಲ್ಲದೆ ಹೋದಲ್ಲಿ ಹೇಗೆ ಚರ್ಚೆ ಮಾಡುವುದು ಎಂದು ಪ್ರಶ್ನೆ ಮಾಡಿದ್ದಾರೆ. ಇದೇ ವೇಳೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಚಿವ ಚೆಲುವರಾಯಸ್ವಾಮಿ, ಹಾಗಾದ್ರೆ ಸಿಎಂ ಇಲ್ಲದೆ ಹೋದರೆ ನೀವೂ ಚರ್ಚೆ ಮಾಡುವುದಿಲ್ಲ. ಅವರಿಗೆ ಆರೋಗ್ಯ ಸರಿ ಇಲ್ಲ ಅನ್ನೋದು ನಿಮಗೆ ಗೊತ್ತಿಲ್ಲವಾ ಎಂದು ಪ್ರಶ್ನೆ ಮಾಡಿದ್ದಾರೆ.

ಈ ವೇಳೆ ಅಶ್ವತ್ಥ್ ನಾರಾಯಣ್ ಅವರು ಸಿಎಂ ಅವರಿಗೆ ಆರೋಗ್ಯ ಸರಿ ಇಲ್ಲ ಅಂತ ಲೆಟರ್ ಏನಾದ್ರೂ ಕೊಟ್ಟಿದ್ದಾರಾ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಆಡಳಿತ ಸರ್ಕಾರದ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ನಾವೂ ಹದಿನೈದು ಮಂದಿ ಶಾಸಕರು ಇಲ್ಲಿದ್ದೇವೆ. ಆದರೂ ನಿಮಗೆ ಸಿಎಂ ಅವರೇ ಬೇಕು ಅಂತ ಹಠ ಹಿಡಿದರೆ ಹೇಗೆ ಎಂದು ಕೇಳಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಅವರು ಸದ್ಯ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದಾರೆ. ಈ ಬಾರಿಯ ಬಜೆಟ್ ಅನ್ನು ಕೂಡ ಕುಳಿತುಕೊಂಡೆ ಓದಿದ್ದಾರೆ. ಇನ್ನು ವಿಶ್ರಾಂತಿಯ ಅಗತ್ಯ ತುಂಬಾನೇ ಇದೆ. ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...