ಸಿಎಂ ಕುರ್ಚಿ ಪೈಟ್ ನಡುವೆ ಒಂದೇ ಹೆಲಿಕಾಪ್ಟರ್ ನಲ್ಲಿ ಸಿಎಂ – ಡಿಸಿಎಂ ಪ್ರಯಾಣ

1 Min Read

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿ ಫೈಟ್ ಮುಸುಕಿನ ಗುದ್ದಾಟದಂತೆ ಆಗಿದೆ. ಹೈಕಮಾಂಡ್ ನಾಯಕರೇ ಇದಕ್ಕೊಂದು ಪರಿಹಾರ ಸೂಚಿಸಬೇಕಾಗಿದ್ದರು, ಆ ಕೆಲಸವನ್ನ ಹೈಕಮಾಂಡ್ ಮಾಡ್ತಾ ಇಲ್ಲ. ಈ ಕಡೆ ಕುರ್ಚಿ ಮೇಲೆ ಕುಳಿತುಕೊಳ್ಳುವ ಕುತೂಹಲವೂ ಕಡಿಮೆ ಆಗ್ತಿಲ್ಲ. ಈ ಫೈಟ್ ನಡುವೆ ಸಿಎಂ ಹಾಗೂ ಡಿಸಿಎಂ ಒಂದೇ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಬೆಳೆಸಿದ್ದಾರೆ.

CWC ಸಭೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಡಿಕೆ ಶಿವಕುಮಾರ್ ಅವರಿಗೆ ಇಲ್ಲ. ಇದರ ನಡುವೆ ದಾವಣಗೆರೆ ಜಿಲ್ಲಾ ಪ್ರವಾಸಕ್ಕೆ ಸಿಎಂ ಹಾಗೂ ಡಿಸಿಎಂ ಒಟ್ಟಿಗೆ ತೆರಳಿದ್ದಾರೆ. ಬೆಂಗಳೂರಿನಿಂದ ಹೆಚ್ಎಎಲ್ ಏರ್ಪೋರ್ಟ್ ನಿಂದ ತೆರಳಿದ್ದು, ಶಾಮನೂರು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಂಜೆ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಾಪಾಸ್ ಆಗಲಿದ್ದಾರೆ.

ಈಗಾಗಲೇ ಡಿಕೆ ಶಿವಕುಮಾರ್ ಅವರು ಈಗಾಗಲೇ ಒಮ್ಮೆ ದೆಹಲಿಗೆ ಹೋಗಿ ಬಂದಿದ್ದಾರೆ. ಆದರೆ ಹೈಕಮಾಂಡ್ ನಾಯಕರ ಭೇಟಿ ಸಾಧ್ಯವಾಗಿಲ್ಲ. ಈಗ CWC ಸಭೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಇದೀಹ ಡಿಕೆ ಶಿವಕುಮಾರ್ ಅವರು ಕೂಡ ಮತ್ತೆ ದೆಹಲಿಗೆ ಹೋಗುವ ಸಾಧ್ಯತೆ ಇದೆ. ಯಾಕಂದ್ರೆ ಡಿಸೆಂಬರ್ 28ರಂದು ಕಾಂಗ್ರೆಸ್ ಸಂಸ್ಥಾಪನಾ ದಿನವಿದೆ. ದೆಹಲಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಹಿರಿಯ ನಾಯಕರು ಡಿಕೆ ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದಾರೆ. ಅಂದಾದರೂ ಹೈಕಮಾಂಡ್ ನಾಯಕರ ಜೊತೆಗೆ ಮಾತುಕತೆ ನಡೆಸುತ್ತಾರಾ ನೋಡಬೇಕಿದೆ.

Share This Article
Enable Notifications OK No thanks