Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳಮೀಸಲಾತಿ ಕುರಿತು ಸಿದ್ಧರಾಮೇಶ್ವರ ಸ್ವಾಮೀಜಿಗೆ ಸಿಎಂ ಈ ರೀತಿಯ ಭರವಸೆ!

---Advertisement---

ಸುದ್ದಿಒನ್, ಬಾಗಲಕೋಟೆ, ಮಾರ್ಚ್. 15  : ಒಳಮೀಸಲಾತಿ ವಿಚಾರದಲ್ಲಿ ಮಾ.27 ರಂದು ನಡೆಯುವ ಸಂಪುಟ ಸಭೆಯಲ್ಲಿ ಎಲ್ಲರಿಗೂ ಸಮಾಧಾನ ಆಗುವ ರೀತಿಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಗೆ ಭರವಸೆ ನೀಡಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಶಂಕುಸ್ಥಾಪನೆ ಕಾರ್ಯಕ್ರಮದ ನಂತರ ನವನಗರದಲ್ಲಿ ಭೋವಿ ಗುರುಪೀಠಕ್ಕೆ ಸಿಎಂ ಭೇಟಿ ನೀಡಿ, ಸ್ವಾಮೀಜಿ ಅವರೊಂದಿಗೆ ಕೆಲಹೊತ್ತು ಚರ್ಚಿಸಿದ್ದಾರೆ.ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ, ಯಾವುದೇ ಲೋಪ ಆಗದಂತೆ ನೋಡಿಕೊಳ್ಳುತ್ತೇವೆ. ಉದ್ಯೋಗ ಭರ್ತಿ ಮಾಡಿಕೊಳ್ಳಬೇಕಾಗಿರುವುದರಿಂದ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now